BREAKING NEWS

Union Budget-2024: ಕೇವಲ ಒಂದು ಗಂಟೆಯಲ್ಲೇ ಬಜೆಟ್‌ ಮುಕ್ತಾಯ: ಇಲ್ಲಿವೆ ಪ್ರಮುಖಾಂಶಗಳು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಫೆ.01) ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು. ಕೇವಲ ಒಂದು ಗಂಟೆಯಲ್ಲಿಯೇ ಬಜೆಟ್‌ ಮಂಡಿಸಿದ್ದು ವಿಶೇಷವಾಗಿದೆ.

ಅತೀ ಕಡಿಮೆ ಅವಧಿಯಲ್ಲಿ ಬಜೆಟ್‌ ಮಂಡಿಸಿದ ಕೀರ್ತಿ ಅವರದ್ದಾಗಿದೆ. ಜೊತೆಗೆ ಅತಿ ದೊಡ್ಡ ಬಜೆಟ್ ಭಾಷಣದ ಹೆಗ್ಗಳಿಯೂ ಅವರದ್ದೇ ಆಗಿದೆ. 2020ರಲ್ಲಿ ಬರೋಬ್ಬರಿ 2 ಗಂಟೆ 45 ನಿಮಿಷಗಳ ದೀರ್ಘಕಾಲದ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್‌ ಅವರು. ಇಂದು ಮಂಡಿಸಿದ ಬಜೆಟ್‌ಗೆ ಕೇವಲ ಒಂದು ಗಂಟೆ ಮಾತ್ರ ಸಮಯವಾಕಾಶ ತೆಗೆದುಕೊಂಡರು.

ಈ ಬಜೆಟ್‌ನಲ್ಲಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಶ್ರಮಿಸುತ್ತಿದೆ. ಸರ್ಕಾರದ ಯೋಜನೆಗಳಲ್ಲಿ ಯುವಕರು, ಮಹಿಳೆಯರು ಮತ್ತು ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರೈಲ್ವೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಬಡ್ಡಿ ರಹಿತ ಸಾಲ, ಐಟಿ, ಸ್ಕಿಲ್‌ ಇಂಡಿಯಾ ಮಿಷನ್, ಮೆಟ್ರೊ ಮತ್ತು ನಮೋ ಭಾರತ್‌ ಯೋಜನೆಯಡಿ ರೈಲುಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಕ್ರಮಗಳ ಬಗ್ಗೆ ವಿಸ್ತಾರವಾಗಿ ಹೇಳಿದ್ದಾರೆ.

ಮಧ್ಯಂತರ ಬಜೆಟ್‌ನ​ ಪ್ರಮುಖಾಂಶಗಳು:

*ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ.
*2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ.
*ಸ್ಕಿಲ್ ಇಂಡಿಯಾ ಮಿಷನ್ 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.
*ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ.
*ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ.
*2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ.
*ವಿತ್ತೀಯ ಕೊರತೆಯ ಮೇಲೆ ಹಿಡಿತ ಸಾಧಿಸಲಾಗಿದೆ.
*23-24ನೇ ಹಣಕಾಸು ವರ್ಷಕ್ಕೆ ಪರಿಷ್ಕೃತ ವಿತ್ತೀಯ ಕೊರತೆ ಶೇ 5.8 ನಿಗದಿಪಡಿಸಲಾಗಿದೆ.
*ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ.
*ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.
*ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು.
*ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.
*ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago