BREAKING NEWS

Union Budget-2024: ನಮ್ಮ ಸರ್ಕಾರಕ್ಕೆ ಈ ನಾಲ್ಕು ಜಾತಿಗಳ ಏಳ್ಗೆ ಮುಖ್ಯ: ವಿತ್ತ ಸಚಿವೆ

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ ಮಾತನಾಡಿರುವ ಅವರು, ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು ಮತ್ತು ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನಿರ್ಮಲಾ ಸೀತರಾಮನ್‌ ಅವರು ಮಾತನಾಡುತ್ತಾ, ನಮ್ಮ ಸರ್ಕಾರ ನಾಲ್ಕು ಜಾತಿಗಳಿಗೆ ಹೆಚ್ಚಿನ ಗಮನ ಕೊಡುತ್ತಿದೆ. ಅವುಗಳೆಂದರೆ ಬಡವರು, ಮಹಿಳೆಯರು, ಯುವಸಮುದಾಯ ಮತ್ತು ರೈತರಾಗಿದ್ದು, ಇವರೇ ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿದ್ದು, ಇವರ ಏಳ್ಗೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. 2047ರ ಒತ್ತಿಗೆ ಭಾರತವನ್ನು ವಿಕಸಿತ ಭಾರತ ಅಥವಾ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

‘ಕಳೆದ 10 ವರ್ಷಗಳಲ್ಲಿ ಪ್ರತಿ ಕುಟುಂಬಕ್ಕೆ ನೀರು, ಗ್ಯಾಸ್, ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಸಾಧನೆಗೆ ಸರ್ಕಾರ ಶ್ರಮಿಸಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿದ್ದೇವೆ. ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ. ಕೇಂದ್ರದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ. ದೇಶದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲಾಗುವುದು. ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು, ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರೆ.

‘ಯುವಕರ ಸಬಲೀಕರಣಕ್ಕೆ ಎನ್​ಇಪಿ ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಕಿಲ್ ಇಂಡಿಯಾ ಮಿಷನ್ ಅಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.

‘ಭಾರತ ವಿಶ್ವದ ಅತಿದೊಡ್ಡ ಹಾಲಿನ ಉತ್ಪಾದಕ ದೇಶವಾಗಿದೆ. ಆದರೆ, ಹಾಲಿನ ಇಳುವರಿ ಬಹಳ ಕಡಿಮೆ. ಈ ಉದ್ಯಮ ಬಲಪಡಿಸಲು ಯೋಜನೆ ಹಾಕಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ ಮಂಡನೆ ವೇಳೆ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago