BREAKING NEWS

Union Budget-2024: ನಮ್ಮ ಸರ್ಕಾರಕ್ಕೆ ಈ ನಾಲ್ಕು ಜಾತಿಗಳ ಏಳ್ಗೆ ಮುಖ್ಯ: ವಿತ್ತ ಸಚಿವೆ

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ ಮಾತನಾಡಿರುವ ಅವರು, ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು ಮತ್ತು ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನಿರ್ಮಲಾ ಸೀತರಾಮನ್‌ ಅವರು ಮಾತನಾಡುತ್ತಾ, ನಮ್ಮ ಸರ್ಕಾರ ನಾಲ್ಕು ಜಾತಿಗಳಿಗೆ ಹೆಚ್ಚಿನ ಗಮನ ಕೊಡುತ್ತಿದೆ. ಅವುಗಳೆಂದರೆ ಬಡವರು, ಮಹಿಳೆಯರು, ಯುವಸಮುದಾಯ ಮತ್ತು ರೈತರಾಗಿದ್ದು, ಇವರೇ ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿದ್ದು, ಇವರ ಏಳ್ಗೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. 2047ರ ಒತ್ತಿಗೆ ಭಾರತವನ್ನು ವಿಕಸಿತ ಭಾರತ ಅಥವಾ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

‘ಕಳೆದ 10 ವರ್ಷಗಳಲ್ಲಿ ಪ್ರತಿ ಕುಟುಂಬಕ್ಕೆ ನೀರು, ಗ್ಯಾಸ್, ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಸಾಧನೆಗೆ ಸರ್ಕಾರ ಶ್ರಮಿಸಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿದ್ದೇವೆ. ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ. ಕೇಂದ್ರದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ. ದೇಶದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲಾಗುವುದು. ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು, ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರೆ.

‘ಯುವಕರ ಸಬಲೀಕರಣಕ್ಕೆ ಎನ್​ಇಪಿ ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಕಿಲ್ ಇಂಡಿಯಾ ಮಿಷನ್ ಅಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.

‘ಭಾರತ ವಿಶ್ವದ ಅತಿದೊಡ್ಡ ಹಾಲಿನ ಉತ್ಪಾದಕ ದೇಶವಾಗಿದೆ. ಆದರೆ, ಹಾಲಿನ ಇಳುವರಿ ಬಹಳ ಕಡಿಮೆ. ಈ ಉದ್ಯಮ ಬಲಪಡಿಸಲು ಯೋಜನೆ ಹಾಕಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ ಮಂಡನೆ ವೇಳೆ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago