ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ ಮಾತನಾಡಿರುವ ಅವರು, ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು ಮತ್ತು ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.
ಇದೇ ವೇಳೆ ನಿರ್ಮಲಾ ಸೀತರಾಮನ್ ಅವರು ಮಾತನಾಡುತ್ತಾ, ನಮ್ಮ ಸರ್ಕಾರ ನಾಲ್ಕು ಜಾತಿಗಳಿಗೆ ಹೆಚ್ಚಿನ ಗಮನ ಕೊಡುತ್ತಿದೆ. ಅವುಗಳೆಂದರೆ ಬಡವರು, ಮಹಿಳೆಯರು, ಯುವಸಮುದಾಯ ಮತ್ತು ರೈತರಾಗಿದ್ದು, ಇವರೇ ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿದ್ದು, ಇವರ ಏಳ್ಗೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. 2047ರ ಒತ್ತಿಗೆ ಭಾರತವನ್ನು ವಿಕಸಿತ ಭಾರತ ಅಥವಾ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.
‘ಕಳೆದ 10 ವರ್ಷಗಳಲ್ಲಿ ಪ್ರತಿ ಕುಟುಂಬಕ್ಕೆ ನೀರು, ಗ್ಯಾಸ್, ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಸಾಧನೆಗೆ ಸರ್ಕಾರ ಶ್ರಮಿಸಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿದ್ದೇವೆ. ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ. ಕೇಂದ್ರದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ. ದೇಶದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲಾಗುವುದು. ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು, ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದಿದ್ದಾರೆ.
‘ಯುವಕರ ಸಬಲೀಕರಣಕ್ಕೆ ಎನ್ಇಪಿ ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಕಿಲ್ ಇಂಡಿಯಾ ಮಿಷನ್ ಅಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.
‘ಭಾರತ ವಿಶ್ವದ ಅತಿದೊಡ್ಡ ಹಾಲಿನ ಉತ್ಪಾದಕ ದೇಶವಾಗಿದೆ. ಆದರೆ, ಹಾಲಿನ ಇಳುವರಿ ಬಹಳ ಕಡಿಮೆ. ಈ ಉದ್ಯಮ ಬಲಪಡಿಸಲು ಯೋಜನೆ ಹಾಕಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…