BREAKING NEWS

ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್‌ ಅವರು ಉದ್ಘಾಟಿಸಿದ್ದು, ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಬೆಂಗಳೂರಿಗೆ ಬರಲು ಸಂತಸವಾಗುತ್ತದೆ. ಈ ನಗರವು ಸಾಕಷ್ಟು ಶಕ್ತಿಯನ್ನು ಹೊಂದಿದೆ. ಇಲ್ಲಿ ಸಕಾರಾತ್ಮಕ ಚಿಂತನೆ ಅಧಿಕವಾಗಿದೆ. ಬೆಂಗಳೂರು ಯಾವಾಗಲೂ ಭಾರತಕ್ಕೆ ಹೊಸ ಚಿತ್ರಣವನ್ನು ನೀಡುತ್ತಿರುತ್ತದೆ. ಈ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ನೀವು ನೋಡಿದ ಹೊಸ ಚಿತ್ರ.  ಭಾರತವು ಇಂದು ಅಭಿವೃದ್ಧಿಯಾಗುತ್ತಿದ್ದು, ದೇಶವು ನಿರ್ಣಾಯಕ ಮತ್ತು ನಮ್ಮ ಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ಹೊಂದಿರುವುದರಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಹೇಳಿದರು.

ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು, 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧದ ಕಾಮಗಾರಿಗೆ ಎರಡು ತಿಂಗಳು ಸಮಯ ತೆಗೆದುಕೊಂಡಿತ್ತು. ಇನ್ನು ಉದ್ಘಾಟನೆಗೆ ಸಚಿವರ ಲಭ್ಯತೆಗಾಗಿ ಒಂದು ತಿಂಗಳು ಹಿಡಿದಿತ್ತು. ಈ ಕಚೇರಿ ಆರಂಭವಾದ ನಂತರ ಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು. ಮತ್ತು ಅಲ್ಲಿಯ ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

“ಎಲ್ & ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ. 3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ. ವೆಚ್ಚವಾಗಿದೆ.

ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ವೆಚ್ಚವಾಗಿದೆ. ಈ ಮೂಲಕ ಸಾಂಪ್ರದಾಯಿಕ ಅಂಚೆ ಕಚೇರಿ ನಿರ್ಮಿಸಿದರೇ ಎಷ್ಟು ಖರ್ಚಾಗುತ್ತಿತ್ತು ಅದಕ್ಕೆ ಹೋಲಿಸಿದರೆ ಈ ಅಂಚೆ ಕಚೇರಿಯ ನಿರ್ಮಾಣ ವೆಚ್ಚದಲ್ಲಿ ಶೇ. 30ರಿಂದ 40ರಷ್ಟು ಹಣ ಇಳಿಕೆಯಾಗಿದೆ.

andolanait

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

21 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

37 mins ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

56 mins ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

2 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago