BREAKING NEWS

ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್‌ ಅವರು ಉದ್ಘಾಟಿಸಿದ್ದು, ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಬೆಂಗಳೂರಿಗೆ ಬರಲು ಸಂತಸವಾಗುತ್ತದೆ. ಈ ನಗರವು ಸಾಕಷ್ಟು ಶಕ್ತಿಯನ್ನು ಹೊಂದಿದೆ. ಇಲ್ಲಿ ಸಕಾರಾತ್ಮಕ ಚಿಂತನೆ ಅಧಿಕವಾಗಿದೆ. ಬೆಂಗಳೂರು ಯಾವಾಗಲೂ ಭಾರತಕ್ಕೆ ಹೊಸ ಚಿತ್ರಣವನ್ನು ನೀಡುತ್ತಿರುತ್ತದೆ. ಈ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ನೀವು ನೋಡಿದ ಹೊಸ ಚಿತ್ರ.  ಭಾರತವು ಇಂದು ಅಭಿವೃದ್ಧಿಯಾಗುತ್ತಿದ್ದು, ದೇಶವು ನಿರ್ಣಾಯಕ ಮತ್ತು ನಮ್ಮ ಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ಹೊಂದಿರುವುದರಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಹೇಳಿದರು.

ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು, 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧದ ಕಾಮಗಾರಿಗೆ ಎರಡು ತಿಂಗಳು ಸಮಯ ತೆಗೆದುಕೊಂಡಿತ್ತು. ಇನ್ನು ಉದ್ಘಾಟನೆಗೆ ಸಚಿವರ ಲಭ್ಯತೆಗಾಗಿ ಒಂದು ತಿಂಗಳು ಹಿಡಿದಿತ್ತು. ಈ ಕಚೇರಿ ಆರಂಭವಾದ ನಂತರ ಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು. ಮತ್ತು ಅಲ್ಲಿಯ ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

“ಎಲ್ & ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ. 3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ. ವೆಚ್ಚವಾಗಿದೆ.

ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ವೆಚ್ಚವಾಗಿದೆ. ಈ ಮೂಲಕ ಸಾಂಪ್ರದಾಯಿಕ ಅಂಚೆ ಕಚೇರಿ ನಿರ್ಮಿಸಿದರೇ ಎಷ್ಟು ಖರ್ಚಾಗುತ್ತಿತ್ತು ಅದಕ್ಕೆ ಹೋಲಿಸಿದರೆ ಈ ಅಂಚೆ ಕಚೇರಿಯ ನಿರ್ಮಾಣ ವೆಚ್ಚದಲ್ಲಿ ಶೇ. 30ರಿಂದ 40ರಷ್ಟು ಹಣ ಇಳಿಕೆಯಾಗಿದೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago