BREAKING NEWS

ಪಟ್ಟು ಬಿಡದ ಡಿಕೆ ಶಿವಕುಮಾರ್ : ಸಿದ್ದರಾಮಯ್ಯ ವಿರುದ್ಧ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ. ಆದರೆ, ಇವುಗಳು ಯಾವುವೂ ಪ್ರಯೋಜನ ನೀಡಿಲ್ಲ.

ಈ ಮಧ್ಯೆ, ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಜತೆ ಬಿಗಿಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್, ನನಗೆ ಸಿಎಂ ಆಗಲು ಅವಕಾಶ ನೀಡದಿದ್ದರೆ ನೀವೇ ಆಗಿ ಎಂದು ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.

2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೆವು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಸೋತಿದ್ದೆವು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ. ಒಂದೋ ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ. ರಾಜ್ಯದಲ್ಲಿ ದಲಿತ ಸಿಎಂ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ದಲಿತರು ಸಿಎಂ ಆದರೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಖರ್ಗೆ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸೋನಿಯಾ, ರಾಹುಲ್ ಜತೆ ಚರ್ಚಿಸಿ ನಿರ್ಧಾರ : ಶಿವಕುಮಾರ್ ನಡುವಣ ಸುದೀರ್ಘ ಮಾತುಕತೆ ನಂತರ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ನಿರ್ಧಾರ ಕಾಯ್ದಿರಿಸಲಾಗಿದೆ. ಗಾಂಧಿ ಕುಟುಂಬದ ಜತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

lokesh

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

30 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago