ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ. ಆದರೆ, ಇವುಗಳು ಯಾವುವೂ ಪ್ರಯೋಜನ ನೀಡಿಲ್ಲ.
ಈ ಮಧ್ಯೆ, ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಜತೆ ಬಿಗಿಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್, ನನಗೆ ಸಿಎಂ ಆಗಲು ಅವಕಾಶ ನೀಡದಿದ್ದರೆ ನೀವೇ ಆಗಿ ಎಂದು ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.
2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೆವು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಸೋತಿದ್ದೆವು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ. ಒಂದೋ ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ. ರಾಜ್ಯದಲ್ಲಿ ದಲಿತ ಸಿಎಂ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ದಲಿತರು ಸಿಎಂ ಆದರೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಖರ್ಗೆ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸೋನಿಯಾ, ರಾಹುಲ್ ಜತೆ ಚರ್ಚಿಸಿ ನಿರ್ಧಾರ : ಶಿವಕುಮಾರ್ ನಡುವಣ ಸುದೀರ್ಘ ಮಾತುಕತೆ ನಂತರ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ನಿರ್ಧಾರ ಕಾಯ್ದಿರಿಸಲಾಗಿದೆ. ಗಾಂಧಿ ಕುಟುಂಬದ ಜತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…