BREAKING NEWS

ಪಠ್ಯಕ್ರಮದಲ್ಲಿ ಸಾವರ್ಕರ್ ಪಠ್ಯ ಸೇರ್ಪಡೆ ಮಾಡಿದ ಯುಪಿ ಸರ್ಕಾರ

ಲಖನೌ : ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವರ್ಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ ಕಾಂಗ್ರೆಸ್ ಸರ್ಕಾರ ಇದನ್ನು ಪರಿಷ್ಕರಣೆ ಮಾಡಿದ್ದು ಇತಿಹಾಸ.

ಇದೀಗ ಉತ್ತರ ಪ್ರದೇಶ ಸರ್ಕಾರ ತನ್ನ ಪಠ್ಯಕ್ರಮದಲ್ಲಿ ವಿನಾಯಕ ದಾಮೋದರ್ ಸಾವರ್ಕರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸೇರಿದಂತೆ 50 ಮಹಾನ್ ವ್ಯಕ್ತಿಗಳ ಜೀವನಚರಿತ್ರೆಯನ್ನು ಸೇರಿಸಿದೆ. ಆದರೆ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಹೊರಗಿಡಲಾಗಿದೆ.

ಜುಲೈ ತಿಂಗಳಿನಿಂದ ಯು.ಪಿ. ಶಿಕ್ಷಣ ಮಂಡಳಿಯು ತನ್ನ ವಿದ್ಯಾರ್ಥಿಗಳಿಗೆ ಭಾರತದ 50 ಮಹಾಪುರುಷರ ಜೀವನ ಮತ್ತು ಅವರ ಜೀವನ ಚರಿತ್ರ್ಯೆ ಕುರಿತಾಗಿ ಕಲಿಸಲು ಮುಂದಾಗಿದೆ.

ಎಲ್ಲಾ ವಿದ್ಯಾರ್ಥಿಗಳಿಗೆ ವಿಷಯವು ಕಡ್ಡಾಯವಾಗಿದೆ ಮತ್ತು ಅದರಲ್ಲಿ ಉತ್ತೀರ್ಣರಾಗುವುದು ಅವಶ್ಯಕ ಎಂದು ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೆಹರೂ ಅವರನ್ನು ಹೊರಗಿಡುವ ನಿರ್ಧಾರವನ್ನು ಸಮರ್ಥಿಸಿಕೊಂಡ ಮಾಧ್ಯಮಿಕ ಶಿಕ್ಷಣ ಸಚಿವ ಗುಲಾಬ್ ದೇವಿ, “ನೆಹರೂ ನೆ ದೇಶ್ ಕೆ ಲಿಯೇ ಅಪ್ನೆ ಪ್ರಾಣೋ ಕಿ ಆಹುತಿ ನಹಿ ದಿ ಥಿ (ನೆಹರೂ ಅವರು ದೇಶಕ್ಕಾಗಿ ಸರ್ವೋಚ್ಚ ತ್ಯಾಗ ಮಾಡಿಲ್ಲ). ಆದ್ದರಿಂದ, 50 ಮಹಾಪುರುಷರ ಜೀವನ ಚರಿತ್ರೆಗಳ ಪಟ್ಟಿಯಿಂದ ನೆಹರೂ ಅವರನ್ನು ಹೊರಗಿಡಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಸಾವರ್ಕರ್ ಅವರನ್ನು ಸೇರ್ಪಡೆ ಮಾಡಿರುವ ಬಗ್ಗೆ , “ನಾವು ನಮ್ಮ ಮಹಾನ್ ನಾಯಕರಾದ ಸಾವರ್ಕರ್ ಮತ್ತು ಪಂ ದೀನ್ ದಯಾಳ್ ಉಪಾಧ್ಯಾಯ ಅವರ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸದಿದ್ದರೆ, ನಾವು ಅವರಿಗೆ ಏನು ಕಲಿಸುತ್ತೇವೆ? ನಮ್ಮ ಮಕ್ಕಳಿಗೆ ಭಾರತದ ಮಹಾನ್ ವ್ಯಕ್ತಿಗಳ ಜೀವನ ಮತ್ತು ಸಮಯದ ಬಗ್ಗೆ ಅರಿವು ಮೂಡಿಸುವ ಬದಲು ಭಯೋತ್ಪಾದಕರ ಬಗ್ಗೆ ಹೇಳಬೇಕೇ?ಮಹಾವೀರ ಸ್ವಾಮಿ, ಭಾರತ ರತ್ನ ಮಹಾಮಾನ ಮದನ್ ಮೋಹನ್ ಮಾಳವೀಯ, ರಾಜಾ ರಾಮ್ ಮೋಹನ್ ರಾಯ್, ಸರೋಜಿನಿ ನಾಯ್ಡು ಮತ್ತು ನಾನಾ ಸಾಹೇಬ್ ಅವರ ಜೀವನ ಚರಿತ್ರೆಗಳನ್ನು ಸಹ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ.ಇದರಲ್ಲಿ ತಪ್ಪೇನು ಎಂದು ಪ್ರಶ್ನೆಸಿದ್ದಾರೆ.

ಈ ವಿಷಯಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ. ಹಾಗೂ ಅದರಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಆದರೆ, ಪ್ರೌಢಶಾಲೆ ಮತ್ತು ಮಧ್ಯಂತರ ಪರೀಕ್ಷೆಗಳ ಅಂಕಪಟ್ಟಿಯಲ್ಲಿ ಅಂಕಗಳನ್ನು ಸೇರಿಸಲಾಗುವುದಿಲ್ಲ ಎಂದು ಯುಪಿ ಬೋರ್ಡ್ ಕಾರ್ಯದರ್ಶಿ ದಿಬ್ಯಕಾಂತ್ ಶುಕ್ಲಾ ಹೇಳಿದ್ದಾರೆ.

ಬಿಜೆಪಿಯೂ 2022 ರ ವಿಧಾನಸಭಾ ಚುನಾವಣೆಗೆ ಬಿಡುಗಡೆಯಾದ ತನ್ನ ಲೋಕ ಕಲ್ಯಾಣ ಸಂಕಲ್ಪ ಪತ್ರದಲ್ಲಿ ಮಹಾಪುರುಷರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೀವನ ಕಥೆಗಳನ್ನು ಶೈಕ್ಷಣಿಕ ಪಠ್ಯಕ್ರಮದಲ್ಲಿ ಸೇರಿಸುವುದಾಗಿ ಭರವಸೆ ನೀಡಿತ್ತು.ಇದಕ್ಕಾಗಿ ಸರ್ಕಾರ ಬಹಳ ದಿನಗಳಿಂದ ಕಸರತ್ತು ನಡೆಸಿತ್ತು.

lokesh

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago