BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

11 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

12 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

12 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

12 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

12 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

12 hours ago