BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago