BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

4 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

6 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

12 mins ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

17 mins ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

27 mins ago