BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago