BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago