BREAKING NEWS

ಏಪ್ರಿಲ್ ಒಂದರಿಂದ UPI ಪೇಮೆಂಟ್ ಮಾಡಿದರೆ ಬೀಳುವುದು ಹೆಚ್ಚುವರಿ ಶುಲ್ಕ !

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೊರಡಿಸಿದೆ. ಇದರ ಪ್ರಕಾರ, ಏಪ್ರಿಲ್ 1 ರಿಂದ ಯುಪಿಐ ಮೂಲಕ ನಡೆಸುವ ವಹಿವಾಟುಗಳ ಮೇಲೆ ‘ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್  ಶುಲ್ಕವನ್ನು ವಿಧಿಸಲು ಶಿಫಾರಸು ಮಾಡಲಾಗಿದೆ. ಈ ಬದಲಾವಣೆ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ.

1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲು ಸಲಹೆ :
NPCI ಹೊರಡಿಸಿದ ಸುತ್ತೋಲೆಯಲ್ಲಿ, ಏಪ್ರಿಲ್ 1 ರಿಂದ 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಈ ಶುಲ್ಕವನ್ನು ವ್ಯಾಪಾರ ವಹಿವಾಟಿಗೆ ಅಂದರೆ ವ್ಯಾಪಾರಿಗಳಿಗೆ ಪಾವತಿಸುವ ಗ್ರಾಹಕರ ಮೇಲೆ ವಿಧಿಸಲಾಗುತ್ತದೆ.  ವ್ಯಾಲೆಟ್ ಅಥವಾ ಕಾರ್ಡ್ ಮೂಲಕ ಮಾಡಿದ ವಹಿವಾಟು PPI ನಲ್ಲಿ ಬರುತ್ತದೆ.

ಡಿಜಿಟಲ್ ಮೋಡ್ ಮೂಲಕ ಮಾಡುವ ಪೇಮೆಂಟ್ ಆಗಲಿವೆ ದುಬಾರಿ : 
NPCI ಯ ಸುತ್ತೋಲೆಯ ಪ್ರಕಾರ ಏಪ್ರಿಲ್ 1 ರಿಂದ Google Pay, Phone Pay ಮತ್ತು Paytm ನಂತಹ ಡಿಜಿಟಲ್ ಮೋಡ್‌ಗಳ ಮೂಲಕ ಮಾಡಿದ ಪಾವತಿಗಳು ದುಬಾರಿಯಾಗುತ್ತವೆ. 2,000 ರೂ.ಗಿಂತ ಹೆಚ್ಚು ಹಣ ಪಾವತಿಸಿದರೆ, ಅದರ ಬದಲಿಗೆ ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.

70 ಪ್ರತಿಶತದಷ್ಟು ಯುಪಿಐ ವಹಿವಾಟುಗಳು 2,000 ರೂಪಾಯಿಗಿಂತ  ಹೆಚ್ಚಾಗಿರುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಏಪ್ರಿಲ್ 1 ರಿಂದ ನಿಯಮವನ್ನು ಜಾರಿಗೊಳಿಸಲಾಗುವುದು. ನಂತರ ಅದನ್ನು ಸೆಪ್ಟೆಂಬರ್ 30, 2023 ರ ಮೊದಲು ಪರಿಶೀಲಿಸಲಾಗುವುದು ಎಂದು ಎನ್‌ಪಿಸಿಐ ಸುತ್ತೋಲೆಯಲ್ಲಿ ಹೇಳಲಾಗಿದೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

10 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago