BREAKING NEWS

ಕೊಬ್ಬರಿಗೆ ಬೆಂಬಲ ನೀಡಲು ಒತ್ತಾಯ: ಹೆಚ್‌ಡಿಕೆ ಪಾದಯಾತ್ರೆ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ. ಕೊಬರಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುವ ಮೂಲಕ ತನ್ನ ರೈತವಿರೋಧಿ ನೀತಿಯ್ನು ಜಾಹೀರು ಮಾಡುತ್ತಿದೆ ಎಂದು ಗುಡುಗಿದರು.

ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಹಾಸನ, ತುಮಕೂರು ಸೇರಿ ಹನ್ನೆರಡು, ಹದಿಮೂರು ಜಿಲ್ಲೆಗಳಲ್ಲಿ ಬೆಳೆಯುವ ಕೊಬರಿ ಬೆಲೆ ಶೇ.50ರಷ್ಟು ಕುಸಿದಿದೆ. ಕಳೆದ ಒಂದು ವರ್ಷದಿಂದ ಏಳೂವರೆ, ಎಂಟೂವರೆ ಸಾವಿರ ದರವನ್ನು ಮಾರುಕಟ್ಟೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ತೆಂಗು ಬೆಳೆಗಾರರು ಖರ್ಚು ವೆಚ್ಚ ಏನಿದೆ, ಅದಕ್ಕೆ ಸರಕಾರ ಮಧ್ಯಸ್ಥಿಕೆ ವಹಿಸಿ ಆರ್ಥಿಕ ನೆರವು ಕೊಡಲು ಒತ್ತಾಯ ಮಾಡಿದ್ದಾರೆ.

12,00 ರೂ. ಬೆಂಬಲ ಕೊಟ್ಟು ಈ ಸರಕಾರ ರೈತರನ್ನು ಭಿಕ್ಷಕುರಂತೆ ನಡೆಸಿಕೊಂಡಿದೆ. 5000 ಕೋಟಿ ಕೆಜಿಗೆ ಕೊಬರಿಗೆ 11,5700 ಕೋಟಿ ರೂ. ನೀಡಿ ಕೇಂದ್ರ ಖರೀದಿ ಮಾಡಿದೆ. ಕೇಂದ್ರಕ್ಕೆ 590 ಕೋಟಿ ರೂ. ಬೆಂಬಲ ಬೆಲೆ ಕೇಂದ್ರ ಸರಕಾರಕ್ಕೆ ಹೊರೆಯಾಗುತ್ತದೆಯೇ? ಇದರಲ್ಲಿ ರಾಜ್ಯ ಸರಕಾರದ ಬೆಂಬಲ ಬೆಲೆ 60 ಕೋಟಿ ರೂ. ಸೇರುತ್ತದೆ. ಇವನ್ನೆಲ್ಲಾ ಸರಕಾರಗಳು ಎಂದು ಕರೀಬೇಕಾ? ಮೂರೂವರೆ ಲಕ್ಷ ರೂ. ಬಜೆಟ್ ಮಂಡನೆ ಮಾಡುವ ಸರಕಾರ ರೈತರನ್ನು ಯಾವ ರೀತಿ ನೋಡುತ್ತಿದೆ. ಕಾಂಗ್ರೆಸ್‌ ಪಕ್ಷದ ಸಂಸದನ ಮನೆಯಲ್ಲಿ 300 ಕೋಟಿ ಕಪ್ಪುಹಣ ಸಿಕ್ಕಿದೆ, ಇದು ನಮ್ಮ‌ ದೇಶ ಎಂದು ಮಾಜಿ ಮುಖ್ಯಮಂತ್ರಿಗಳು ಬೇಸರ ವ್ಯಕ್ತಪಡಿಸಿದರು.

ಸಚಿವ ಶಿವಾನಂದ ಪಾಟೀಲ್ ಅವರು ಎರಡು ಲಕ್ಷ ಟನ್ ಕೊಬರಿ ಉತ್ಪಾದನೆ ಇದೆ ಎಂದು ಹೇಳಿದ್ದಾರೆ. ಅಷ್ಟನ್ನು ಎರಡು ಸರಕಾರಗಳು ಖರೀದಿ ಮಾಡಿದರೆ 2,500 ಕೋಟಿ ರೂ. ಬರಬಹುದು. 1,500 ಕೋಟಿ ರೂ. ಸರಕಾರಕ್ಕೆ ವಾಪಸ್ ಬರುತ್ತದೆ. ಈ ಸರಕಾರದ ನೀತಿಯನ್ನು ನಾಡಿನ ಜನತೆ, ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಮ್ಮ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಕೊಬರಿ ಬೆಳೆಯುವ ರೈತರಲ್ಲಿ ಮನವಿ ಮಾಡುತ್ತೇನೆ. ಎರಡು ಸರಕಾರಗಳ ಕಣ್ಣು ತೆರೆಸಲು ಅರಸೀಕೆರೆಯಿಂದ ತುಮಕೂರುವರೆಗೆ ಪಾದಯಾತ್ರೆ ಮಾಡುತ್ತೇನೆ.

ನನಗೆ ಆರೋಗ್ಯ ಸಮಸ್ಯೆಯಿದೆ, ಅದಕ್ಕೆ ಹೆದರಿ ಕೂರಲ್ಲ. ಅಧಿವೇಶನ ಮುಗಿದ ಮೇಲೆ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದ ಅವರು; ಎನ್‌ಡಿಎ ಜತೆ ಮೈತ್ರಿ ಆಗಿದೆ ಎಂದು ಮೃದುಧೋರಣೆ ತೋರಲ್ಲ. ನಾನೇ ಸಿಎಂ ಆಗಿ ಅಧಿಕಾರದಲ್ಲಿ ಇದ್ದಿದ್ದರೆ ಕ್ವಿಂಟಾಲ್ ಕೊಬರಿಗೆ ಹದಿನೈದು ಸಾವಿರ ರೂ. ಘೋಷಣೆ ಮಾಡುತ್ತಿದ್ದೆ. ನನ್ನ ಮನಸ್ಸಿಗೆ ನೋವಿದೆ, ಈ ಜನಗಳಲ್ಲಿ ಯಾವಾಗ ತಿಳಿವಳಿಕೆ ಬರುತ್ತದೆ ಎಂದು ಎಂದು ಅವರು ನೋವು ವ್ಯಕ್ತಪಡಿಸಿದರು.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

2 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

2 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

2 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

2 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

3 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

3 hours ago