ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ. ಕೊಬರಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುವ ಮೂಲಕ ತನ್ನ ರೈತವಿರೋಧಿ ನೀತಿಯ್ನು ಜಾಹೀರು ಮಾಡುತ್ತಿದೆ ಎಂದು ಗುಡುಗಿದರು.
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಹಾಸನ, ತುಮಕೂರು ಸೇರಿ ಹನ್ನೆರಡು, ಹದಿಮೂರು ಜಿಲ್ಲೆಗಳಲ್ಲಿ ಬೆಳೆಯುವ ಕೊಬರಿ ಬೆಲೆ ಶೇ.50ರಷ್ಟು ಕುಸಿದಿದೆ. ಕಳೆದ ಒಂದು ವರ್ಷದಿಂದ ಏಳೂವರೆ, ಎಂಟೂವರೆ ಸಾವಿರ ದರವನ್ನು ಮಾರುಕಟ್ಟೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ತೆಂಗು ಬೆಳೆಗಾರರು ಖರ್ಚು ವೆಚ್ಚ ಏನಿದೆ, ಅದಕ್ಕೆ ಸರಕಾರ ಮಧ್ಯಸ್ಥಿಕೆ ವಹಿಸಿ ಆರ್ಥಿಕ ನೆರವು ಕೊಡಲು ಒತ್ತಾಯ ಮಾಡಿದ್ದಾರೆ.
12,00 ರೂ. ಬೆಂಬಲ ಕೊಟ್ಟು ಈ ಸರಕಾರ ರೈತರನ್ನು ಭಿಕ್ಷಕುರಂತೆ ನಡೆಸಿಕೊಂಡಿದೆ. 5000 ಕೋಟಿ ಕೆಜಿಗೆ ಕೊಬರಿಗೆ 11,5700 ಕೋಟಿ ರೂ. ನೀಡಿ ಕೇಂದ್ರ ಖರೀದಿ ಮಾಡಿದೆ. ಕೇಂದ್ರಕ್ಕೆ 590 ಕೋಟಿ ರೂ. ಬೆಂಬಲ ಬೆಲೆ ಕೇಂದ್ರ ಸರಕಾರಕ್ಕೆ ಹೊರೆಯಾಗುತ್ತದೆಯೇ? ಇದರಲ್ಲಿ ರಾಜ್ಯ ಸರಕಾರದ ಬೆಂಬಲ ಬೆಲೆ 60 ಕೋಟಿ ರೂ. ಸೇರುತ್ತದೆ. ಇವನ್ನೆಲ್ಲಾ ಸರಕಾರಗಳು ಎಂದು ಕರೀಬೇಕಾ? ಮೂರೂವರೆ ಲಕ್ಷ ರೂ. ಬಜೆಟ್ ಮಂಡನೆ ಮಾಡುವ ಸರಕಾರ ರೈತರನ್ನು ಯಾವ ರೀತಿ ನೋಡುತ್ತಿದೆ. ಕಾಂಗ್ರೆಸ್ ಪಕ್ಷದ ಸಂಸದನ ಮನೆಯಲ್ಲಿ 300 ಕೋಟಿ ಕಪ್ಪುಹಣ ಸಿಕ್ಕಿದೆ, ಇದು ನಮ್ಮ ದೇಶ ಎಂದು ಮಾಜಿ ಮುಖ್ಯಮಂತ್ರಿಗಳು ಬೇಸರ ವ್ಯಕ್ತಪಡಿಸಿದರು.
ಸಚಿವ ಶಿವಾನಂದ ಪಾಟೀಲ್ ಅವರು ಎರಡು ಲಕ್ಷ ಟನ್ ಕೊಬರಿ ಉತ್ಪಾದನೆ ಇದೆ ಎಂದು ಹೇಳಿದ್ದಾರೆ. ಅಷ್ಟನ್ನು ಎರಡು ಸರಕಾರಗಳು ಖರೀದಿ ಮಾಡಿದರೆ 2,500 ಕೋಟಿ ರೂ. ಬರಬಹುದು. 1,500 ಕೋಟಿ ರೂ. ಸರಕಾರಕ್ಕೆ ವಾಪಸ್ ಬರುತ್ತದೆ. ಈ ಸರಕಾರದ ನೀತಿಯನ್ನು ನಾಡಿನ ಜನತೆ, ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ನಮ್ಮ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಕೊಬರಿ ಬೆಳೆಯುವ ರೈತರಲ್ಲಿ ಮನವಿ ಮಾಡುತ್ತೇನೆ. ಎರಡು ಸರಕಾರಗಳ ಕಣ್ಣು ತೆರೆಸಲು ಅರಸೀಕೆರೆಯಿಂದ ತುಮಕೂರುವರೆಗೆ ಪಾದಯಾತ್ರೆ ಮಾಡುತ್ತೇನೆ.
ನನಗೆ ಆರೋಗ್ಯ ಸಮಸ್ಯೆಯಿದೆ, ಅದಕ್ಕೆ ಹೆದರಿ ಕೂರಲ್ಲ. ಅಧಿವೇಶನ ಮುಗಿದ ಮೇಲೆ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದ ಅವರು; ಎನ್ಡಿಎ ಜತೆ ಮೈತ್ರಿ ಆಗಿದೆ ಎಂದು ಮೃದುಧೋರಣೆ ತೋರಲ್ಲ. ನಾನೇ ಸಿಎಂ ಆಗಿ ಅಧಿಕಾರದಲ್ಲಿ ಇದ್ದಿದ್ದರೆ ಕ್ವಿಂಟಾಲ್ ಕೊಬರಿಗೆ ಹದಿನೈದು ಸಾವಿರ ರೂ. ಘೋಷಣೆ ಮಾಡುತ್ತಿದ್ದೆ. ನನ್ನ ಮನಸ್ಸಿಗೆ ನೋವಿದೆ, ಈ ಜನಗಳಲ್ಲಿ ಯಾವಾಗ ತಿಳಿವಳಿಕೆ ಬರುತ್ತದೆ ಎಂದು ಎಂದು ಅವರು ನೋವು ವ್ಯಕ್ತಪಡಿಸಿದರು.
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…