BREAKING NEWS

ಕೊಬ್ಬರಿಗೆ ಬೆಂಬಲ ನೀಡಲು ಒತ್ತಾಯ: ಹೆಚ್‌ಡಿಕೆ ಪಾದಯಾತ್ರೆ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ. ಕೊಬರಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುವ ಮೂಲಕ ತನ್ನ ರೈತವಿರೋಧಿ ನೀತಿಯ್ನು ಜಾಹೀರು ಮಾಡುತ್ತಿದೆ ಎಂದು ಗುಡುಗಿದರು.

ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಹಾಸನ, ತುಮಕೂರು ಸೇರಿ ಹನ್ನೆರಡು, ಹದಿಮೂರು ಜಿಲ್ಲೆಗಳಲ್ಲಿ ಬೆಳೆಯುವ ಕೊಬರಿ ಬೆಲೆ ಶೇ.50ರಷ್ಟು ಕುಸಿದಿದೆ. ಕಳೆದ ಒಂದು ವರ್ಷದಿಂದ ಏಳೂವರೆ, ಎಂಟೂವರೆ ಸಾವಿರ ದರವನ್ನು ಮಾರುಕಟ್ಟೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ತೆಂಗು ಬೆಳೆಗಾರರು ಖರ್ಚು ವೆಚ್ಚ ಏನಿದೆ, ಅದಕ್ಕೆ ಸರಕಾರ ಮಧ್ಯಸ್ಥಿಕೆ ವಹಿಸಿ ಆರ್ಥಿಕ ನೆರವು ಕೊಡಲು ಒತ್ತಾಯ ಮಾಡಿದ್ದಾರೆ.

12,00 ರೂ. ಬೆಂಬಲ ಕೊಟ್ಟು ಈ ಸರಕಾರ ರೈತರನ್ನು ಭಿಕ್ಷಕುರಂತೆ ನಡೆಸಿಕೊಂಡಿದೆ. 5000 ಕೋಟಿ ಕೆಜಿಗೆ ಕೊಬರಿಗೆ 11,5700 ಕೋಟಿ ರೂ. ನೀಡಿ ಕೇಂದ್ರ ಖರೀದಿ ಮಾಡಿದೆ. ಕೇಂದ್ರಕ್ಕೆ 590 ಕೋಟಿ ರೂ. ಬೆಂಬಲ ಬೆಲೆ ಕೇಂದ್ರ ಸರಕಾರಕ್ಕೆ ಹೊರೆಯಾಗುತ್ತದೆಯೇ? ಇದರಲ್ಲಿ ರಾಜ್ಯ ಸರಕಾರದ ಬೆಂಬಲ ಬೆಲೆ 60 ಕೋಟಿ ರೂ. ಸೇರುತ್ತದೆ. ಇವನ್ನೆಲ್ಲಾ ಸರಕಾರಗಳು ಎಂದು ಕರೀಬೇಕಾ? ಮೂರೂವರೆ ಲಕ್ಷ ರೂ. ಬಜೆಟ್ ಮಂಡನೆ ಮಾಡುವ ಸರಕಾರ ರೈತರನ್ನು ಯಾವ ರೀತಿ ನೋಡುತ್ತಿದೆ. ಕಾಂಗ್ರೆಸ್‌ ಪಕ್ಷದ ಸಂಸದನ ಮನೆಯಲ್ಲಿ 300 ಕೋಟಿ ಕಪ್ಪುಹಣ ಸಿಕ್ಕಿದೆ, ಇದು ನಮ್ಮ‌ ದೇಶ ಎಂದು ಮಾಜಿ ಮುಖ್ಯಮಂತ್ರಿಗಳು ಬೇಸರ ವ್ಯಕ್ತಪಡಿಸಿದರು.

ಸಚಿವ ಶಿವಾನಂದ ಪಾಟೀಲ್ ಅವರು ಎರಡು ಲಕ್ಷ ಟನ್ ಕೊಬರಿ ಉತ್ಪಾದನೆ ಇದೆ ಎಂದು ಹೇಳಿದ್ದಾರೆ. ಅಷ್ಟನ್ನು ಎರಡು ಸರಕಾರಗಳು ಖರೀದಿ ಮಾಡಿದರೆ 2,500 ಕೋಟಿ ರೂ. ಬರಬಹುದು. 1,500 ಕೋಟಿ ರೂ. ಸರಕಾರಕ್ಕೆ ವಾಪಸ್ ಬರುತ್ತದೆ. ಈ ಸರಕಾರದ ನೀತಿಯನ್ನು ನಾಡಿನ ಜನತೆ, ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಮ್ಮ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಕೊಬರಿ ಬೆಳೆಯುವ ರೈತರಲ್ಲಿ ಮನವಿ ಮಾಡುತ್ತೇನೆ. ಎರಡು ಸರಕಾರಗಳ ಕಣ್ಣು ತೆರೆಸಲು ಅರಸೀಕೆರೆಯಿಂದ ತುಮಕೂರುವರೆಗೆ ಪಾದಯಾತ್ರೆ ಮಾಡುತ್ತೇನೆ.

ನನಗೆ ಆರೋಗ್ಯ ಸಮಸ್ಯೆಯಿದೆ, ಅದಕ್ಕೆ ಹೆದರಿ ಕೂರಲ್ಲ. ಅಧಿವೇಶನ ಮುಗಿದ ಮೇಲೆ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದ ಅವರು; ಎನ್‌ಡಿಎ ಜತೆ ಮೈತ್ರಿ ಆಗಿದೆ ಎಂದು ಮೃದುಧೋರಣೆ ತೋರಲ್ಲ. ನಾನೇ ಸಿಎಂ ಆಗಿ ಅಧಿಕಾರದಲ್ಲಿ ಇದ್ದಿದ್ದರೆ ಕ್ವಿಂಟಾಲ್ ಕೊಬರಿಗೆ ಹದಿನೈದು ಸಾವಿರ ರೂ. ಘೋಷಣೆ ಮಾಡುತ್ತಿದ್ದೆ. ನನ್ನ ಮನಸ್ಸಿಗೆ ನೋವಿದೆ, ಈ ಜನಗಳಲ್ಲಿ ಯಾವಾಗ ತಿಳಿವಳಿಕೆ ಬರುತ್ತದೆ ಎಂದು ಎಂದು ಅವರು ನೋವು ವ್ಯಕ್ತಪಡಿಸಿದರು.

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago