BREAKING NEWS

ಪಾಂಡವಪುರದಲ್ಲಿ ಉರಿಗೌಡ-ನಂಜೇಗೌಡ ದ್ವಾರ ಮತ್ತೆ ಪ್ರತ್ಯಕ್ಷ

ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ  ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು  ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ.  ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ ಅವರ ಹೆಸರು ಮತ್ತು ಚಿತ್ರಗಳನ್ನು ಹಾಕಲಾಗಿತ್ತು. ಇಡೀ ಕಾರ್ಯಕ್ರಮದ ಪ್ರವೇಶ ದ್ವಾರಕ್ಕೆ ಉರಿಗೌಡ ದೊಡ್ಡ ನಂಜೇಗೌಡ ದ್ವಾರ ಎಂದೇ ಹೆಸರಿಡಲಾಗಿತ್ತು. ಪಟ್ಟಣದ ಟಿಎಪಿಸಿಎಂಎಸ್‌ ಪ್ರವೇಶ ದ್ವಾರಕ್ಕೆ ಉರಿಗೌಡ ನಂಜೇಗೌಡ ಹೆಸರಿನಲ್ಲಿ ಫ್ಲೆಕ್ಸ್‌ ಹಾಕಲಾಗಿತ್ತು.

ಉರಿಗೌಡ ನಂಜೇಗೌಡ ವಿಚಾರ ವಿವಾದಕ್ಕೆ ತಿರುಗಿದ ಬಳಿಕ ಜಿಲ್ಲಾಡಳಿತ ಕಾರ್ಯಕ್ರಮಕ್ಕೆಂದು ಹಾಕಲಾಗಿದ್ದ ಫ್ಲೆಕ್ಸ್‌ ಗಳನ್ನು ತೆರವುಗೊಳಿಸಿತ್ತು. ಸಚಿವ ಮುನಿರತ್ನ ಇದೇ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಘೋಷಿಸಿದಾಗ   ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಮುನಿರತ್ನ ಅವರನ್ನು ಕರೆಸಿ ಸಾಕ್ಷ್ಯಾಧಾರ ಲಭ್ಯವಾಗುವ ತನಕ ಯಾರೂ ಕೂಡ ಈ ಕುರಿತ ಚರ್ಚೆ ಮುಂದುವರಿಸಬಾರದು ಎಂದ ತಿಳಿಸಿದ್ಮೇದರು. ಬಳಿಕ ಈ  ಚರ್ಚೆ ತಣ್ಣಗಾಗಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದರ ಬಹಿರಂಗ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿದ್ದರು . ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಚರ್ಚೆ ತಡೆದ ಶ್ರೀಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಉರಿಗೌಡ ನಂಜೇಗೌಡ ಹೆಸರಿನ ದ್ವಾರದ ವಿವಾದ ಪಾಂಡವಪುರಕ್ಕೂ ಕಾಲಿಟ್ಟಿದೆ. ಪ್ರಕರಣಕ್ಕೆ ಮತ್ತೆ ಜೀವ ನೀಡುವ ಪ್ರಯತ್ನ ನಡೆದಿದೆ. ಕಾರ್ಯಕ್ರಮದ ಸ್ವಾಗತ ಫ್ಲೆಕ್ಸ್ ನಲ್ಲಿ ಶೋಭಾ ಕರಂದ್ಲಾಜೆ ಅವರ ಪೋಟೋ ಕೂಡಾ ಹಾಕಲಾಗಿತ್ತು.

lokesh

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

4 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

4 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

5 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

5 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

5 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

5 hours ago