ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ ಅವರ ಹೆಸರು ಮತ್ತು ಚಿತ್ರಗಳನ್ನು ಹಾಕಲಾಗಿತ್ತು. ಇಡೀ ಕಾರ್ಯಕ್ರಮದ ಪ್ರವೇಶ ದ್ವಾರಕ್ಕೆ ಉರಿಗೌಡ ದೊಡ್ಡ ನಂಜೇಗೌಡ ದ್ವಾರ ಎಂದೇ ಹೆಸರಿಡಲಾಗಿತ್ತು. ಪಟ್ಟಣದ ಟಿಎಪಿಸಿಎಂಎಸ್ ಪ್ರವೇಶ ದ್ವಾರಕ್ಕೆ ಉರಿಗೌಡ ನಂಜೇಗೌಡ ಹೆಸರಿನಲ್ಲಿ ಫ್ಲೆಕ್ಸ್ ಹಾಕಲಾಗಿತ್ತು.
ಉರಿಗೌಡ ನಂಜೇಗೌಡ ವಿಚಾರ ವಿವಾದಕ್ಕೆ ತಿರುಗಿದ ಬಳಿಕ ಜಿಲ್ಲಾಡಳಿತ ಕಾರ್ಯಕ್ರಮಕ್ಕೆಂದು ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿತ್ತು. ಸಚಿವ ಮುನಿರತ್ನ ಇದೇ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಘೋಷಿಸಿದಾಗ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಮುನಿರತ್ನ ಅವರನ್ನು ಕರೆಸಿ ಸಾಕ್ಷ್ಯಾಧಾರ ಲಭ್ಯವಾಗುವ ತನಕ ಯಾರೂ ಕೂಡ ಈ ಕುರಿತ ಚರ್ಚೆ ಮುಂದುವರಿಸಬಾರದು ಎಂದ ತಿಳಿಸಿದ್ಮೇದರು. ಬಳಿಕ ಈ ಚರ್ಚೆ ತಣ್ಣಗಾಗಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದರ ಬಹಿರಂಗ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿದ್ದರು . ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಚರ್ಚೆ ತಡೆದ ಶ್ರೀಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಉರಿಗೌಡ ನಂಜೇಗೌಡ ಹೆಸರಿನ ದ್ವಾರದ ವಿವಾದ ಪಾಂಡವಪುರಕ್ಕೂ ಕಾಲಿಟ್ಟಿದೆ. ಪ್ರಕರಣಕ್ಕೆ ಮತ್ತೆ ಜೀವ ನೀಡುವ ಪ್ರಯತ್ನ ನಡೆದಿದೆ. ಕಾರ್ಯಕ್ರಮದ ಸ್ವಾಗತ ಫ್ಲೆಕ್ಸ್ ನಲ್ಲಿ ಶೋಭಾ ಕರಂದ್ಲಾಜೆ ಅವರ ಪೋಟೋ ಕೂಡಾ ಹಾಕಲಾಗಿತ್ತು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…