ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ ಅವರ ಹೆಸರು ಮತ್ತು ಚಿತ್ರಗಳನ್ನು ಹಾಕಲಾಗಿತ್ತು. ಇಡೀ ಕಾರ್ಯಕ್ರಮದ ಪ್ರವೇಶ ದ್ವಾರಕ್ಕೆ ಉರಿಗೌಡ ದೊಡ್ಡ ನಂಜೇಗೌಡ ದ್ವಾರ ಎಂದೇ ಹೆಸರಿಡಲಾಗಿತ್ತು. ಪಟ್ಟಣದ ಟಿಎಪಿಸಿಎಂಎಸ್ ಪ್ರವೇಶ ದ್ವಾರಕ್ಕೆ ಉರಿಗೌಡ ನಂಜೇಗೌಡ ಹೆಸರಿನಲ್ಲಿ ಫ್ಲೆಕ್ಸ್ ಹಾಕಲಾಗಿತ್ತು.
ಉರಿಗೌಡ ನಂಜೇಗೌಡ ವಿಚಾರ ವಿವಾದಕ್ಕೆ ತಿರುಗಿದ ಬಳಿಕ ಜಿಲ್ಲಾಡಳಿತ ಕಾರ್ಯಕ್ರಮಕ್ಕೆಂದು ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿತ್ತು. ಸಚಿವ ಮುನಿರತ್ನ ಇದೇ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಘೋಷಿಸಿದಾಗ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಮುನಿರತ್ನ ಅವರನ್ನು ಕರೆಸಿ ಸಾಕ್ಷ್ಯಾಧಾರ ಲಭ್ಯವಾಗುವ ತನಕ ಯಾರೂ ಕೂಡ ಈ ಕುರಿತ ಚರ್ಚೆ ಮುಂದುವರಿಸಬಾರದು ಎಂದ ತಿಳಿಸಿದ್ಮೇದರು. ಬಳಿಕ ಈ ಚರ್ಚೆ ತಣ್ಣಗಾಗಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದರ ಬಹಿರಂಗ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿದ್ದರು . ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಚರ್ಚೆ ತಡೆದ ಶ್ರೀಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಉರಿಗೌಡ ನಂಜೇಗೌಡ ಹೆಸರಿನ ದ್ವಾರದ ವಿವಾದ ಪಾಂಡವಪುರಕ್ಕೂ ಕಾಲಿಟ್ಟಿದೆ. ಪ್ರಕರಣಕ್ಕೆ ಮತ್ತೆ ಜೀವ ನೀಡುವ ಪ್ರಯತ್ನ ನಡೆದಿದೆ. ಕಾರ್ಯಕ್ರಮದ ಸ್ವಾಗತ ಫ್ಲೆಕ್ಸ್ ನಲ್ಲಿ ಶೋಭಾ ಕರಂದ್ಲಾಜೆ ಅವರ ಪೋಟೋ ಕೂಡಾ ಹಾಕಲಾಗಿತ್ತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…