ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ ಅವರ ಹೆಸರು ಮತ್ತು ಚಿತ್ರಗಳನ್ನು ಹಾಕಲಾಗಿತ್ತು. ಇಡೀ ಕಾರ್ಯಕ್ರಮದ ಪ್ರವೇಶ ದ್ವಾರಕ್ಕೆ ಉರಿಗೌಡ ದೊಡ್ಡ ನಂಜೇಗೌಡ ದ್ವಾರ ಎಂದೇ ಹೆಸರಿಡಲಾಗಿತ್ತು. ಪಟ್ಟಣದ ಟಿಎಪಿಸಿಎಂಎಸ್ ಪ್ರವೇಶ ದ್ವಾರಕ್ಕೆ ಉರಿಗೌಡ ನಂಜೇಗೌಡ ಹೆಸರಿನಲ್ಲಿ ಫ್ಲೆಕ್ಸ್ ಹಾಕಲಾಗಿತ್ತು.
ಉರಿಗೌಡ ನಂಜೇಗೌಡ ವಿಚಾರ ವಿವಾದಕ್ಕೆ ತಿರುಗಿದ ಬಳಿಕ ಜಿಲ್ಲಾಡಳಿತ ಕಾರ್ಯಕ್ರಮಕ್ಕೆಂದು ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿತ್ತು. ಸಚಿವ ಮುನಿರತ್ನ ಇದೇ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಘೋಷಿಸಿದಾಗ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಮುನಿರತ್ನ ಅವರನ್ನು ಕರೆಸಿ ಸಾಕ್ಷ್ಯಾಧಾರ ಲಭ್ಯವಾಗುವ ತನಕ ಯಾರೂ ಕೂಡ ಈ ಕುರಿತ ಚರ್ಚೆ ಮುಂದುವರಿಸಬಾರದು ಎಂದ ತಿಳಿಸಿದ್ಮೇದರು. ಬಳಿಕ ಈ ಚರ್ಚೆ ತಣ್ಣಗಾಗಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಇದರ ಬಹಿರಂಗ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿದ್ದರು . ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಚರ್ಚೆ ತಡೆದ ಶ್ರೀಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಉರಿಗೌಡ ನಂಜೇಗೌಡ ಹೆಸರಿನ ದ್ವಾರದ ವಿವಾದ ಪಾಂಡವಪುರಕ್ಕೂ ಕಾಲಿಟ್ಟಿದೆ. ಪ್ರಕರಣಕ್ಕೆ ಮತ್ತೆ ಜೀವ ನೀಡುವ ಪ್ರಯತ್ನ ನಡೆದಿದೆ. ಕಾರ್ಯಕ್ರಮದ ಸ್ವಾಗತ ಫ್ಲೆಕ್ಸ್ ನಲ್ಲಿ ಶೋಭಾ ಕರಂದ್ಲಾಜೆ ಅವರ ಪೋಟೋ ಕೂಡಾ ಹಾಕಲಾಗಿತ್ತು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…