ಮೈಸೂರು: ಜಯಲಕ್ಷ್ಮಿ ವಿಲಾಸ ಮ್ಯಾನ್ಷನ್ ನ ಜಾನಪದ ವಸ್ತುಸಂಗ್ರಹಾಲಯ ಸಂರಕ್ಷಣಾ ಯೋಜನೆಗೆ US ಮಿಷನ್ ಬೆಂಬಲ ನೀಡಿದೆ. ಈ ಸಂಬಂಧ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಇಂದು ಒಡಂಬಡಿಕೆ ಕಾರ್ಯ ನಡೆಸಲಾಯಿತು.
ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿವಿ, ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಹಾಗೂ ಷಾ ಫೌಂಡೇಶನ್ ಗಳ ಜೊತೆಗೂಡಿ ಜಯಲಕ್ಷ್ಮಿ ವಿಲಾಸ ಅರಮನೆಯ ಸಂರಕ್ಷಣಾ ಕಾರ್ಯ ನಡೆಯಲಿದೆ.
ಪಾರಂಪರಿಕ ಕಟ್ಟಡದ ಸಂರಕ್ಷಣೆ ಕಾರ್ಯಕ್ಕಾಗಿ ನುರಿತ ಪಾರಂಪರಿಕ ತಜ್ಞರು, ಅನುಭವಿಗಳನ್ನು ಒಳಗೊಂಡ ಸಮಿತಿಯನ್ನ ಮೈಸೂರು ವಿವಿ ರಚನೆ ಮಾಡಿದ್ದು, ಸುಮಾರು 5 ರಿಂದ 7 ವರ್ಷಗಳ ಅವಧಿಯಲ್ಲಿ ಸಂರಕ್ಷಣಾ ಕಾರ್ಯ ಮುಗಿಯಲಿದೆ.
ಚೆನ್ನೈನ ಯು ಎಸ್ ಕಾನ್ಸಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯು ಹಾಡ್ಸಜ್ ನೇತೃತ್ವದ ತಂಡ ಹಾಗೂ ಷಾ ಫೌಂಡೇಶನ್ ನ ಹರೀಶ್ ಮತ್ತು ಬೀನಾ ಅವರನ್ನೊಳಗೊಂಡ ತಂಡದ ಜೊತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಒಡಂಬಡಿಕೆ ಮಾಡಿಕೊಂಡರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…