ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.
ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದರು.
ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…