BREAKING NEWS

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದರು.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದರು.

andolanait

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

24 mins ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

29 mins ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

4 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

4 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

4 hours ago