ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಮೇಲೆ ಡ್ರೋನ್ ಕ್ಯಾಮೆರಾ ಬಳಸಿ ವೀಡಿಯೋ ಚೀತ್ರೀಕರಣ ಮಾಡಿದ್ದರು.
ಚಿತ್ರೀಕರಣದ ಕೆಲವು ದೃಶ್ಯಗಳನ್ನು ಹಾಗೂ ಕೆಲವು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಯಾವುದೇ ಅನುಮತಿ ಇಲ್ಲದೆ ಅಥವ ಅಧಿಕಾರಿಗಳ ಗಮನಕ್ಕೆ ತರದೆ ಡ್ರೋನ್ ಬಳಸಿದ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಜ.೧೦ರಂದು ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಿರುವ ಗೋಪಾಲಸ್ವಾಮಿ ಬೆಟ್ಟ ವಲಯಾ ಅರಣ್ಯಾಧಿಕಾರಿಗಳ ಕಚೇರಿ, ಅನುಮತಿ ಇಲ್ಲದೆ ಡ್ರೋನ್ ಬಳಕೆ ಮಾಡಿರುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ ೧೯೭೨ ಸೆಕ್ಷನ್ ೨೮,೧(ಬಿ)ರ ಉಲ್ಲಂಘನೆಯಾಗಿದೆ.
ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಸಂಜೆ ೬ಗಂಟೆ ಎಂದು ನಮೂದಿಸಿದ್ದೀರಿ. ಬೆಟ್ಟದ ತಪ್ಪಲಿನಿಂದ ದೇವಾಲಯಕ್ಕೆ ತೆರಳಲು ಸಂಜೆ ೪ಗಂಟೆ ವರೆಗೆ ಮಾತ್ರ ಅನುಮತಿ ಇರುತ್ತದೆ. ಹೀಗಾಗಿ ಈ ವಿಚಾರ ವ್ಯಾಪಕ ಚರ್ಚೆಗೆ ಗುರಿಯಾಗಿದೆ.
ಈ ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಅರಣ್ಯಾಧಿಕಾರಿಗಳು ನೀಡಿರುವ ನೋಟಿಸ್ನಲ್ಲಿ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…