BREAKING NEWS

ಅರಣ್ಯ ನಿಯಮ ಉಲ್ಲಂಘಿಸಿ ಡ್ರೋನ್‌ ಬಳಕೆ: ಪತ್ರಕರ್ತ ವಿಶ್ವೇಶ್ವರ ಭಟ್‌ಗೆ ನೋಟಿಸ್‌

ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್‌ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ಮೇಲೆ ಡ್ರೋನ್‌ ಕ್ಯಾಮೆರಾ ಬಳಸಿ ವೀಡಿಯೋ ಚೀತ್ರೀಕರಣ ಮಾಡಿದ್ದರು.

ಚಿತ್ರೀಕರಣದ ಕೆಲವು ದೃಶ್ಯಗಳನ್ನು ಹಾಗೂ ಕೆಲವು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಯಾವುದೇ ಅನುಮತಿ ಇಲ್ಲದೆ ಅಥವ ಅಧಿಕಾರಿಗಳ ಗಮನಕ್ಕೆ ತರದೆ ಡ್ರೋನ್‌ ಬಳಸಿದ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಜ.೧೦ರಂದು ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಿರುವ ಗೋಪಾಲಸ್ವಾಮಿ ಬೆಟ್ಟ ವಲಯಾ ಅರಣ್ಯಾಧಿಕಾರಿಗಳ ಕಚೇರಿ, ಅನುಮತಿ ಇಲ್ಲದೆ ಡ್ರೋನ್‌ ಬಳಕೆ ಮಾಡಿರುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ ೧೯೭೨ ಸೆಕ್ಷನ್‌ ೨೮,೧(ಬಿ)ರ ಉಲ್ಲಂಘನೆಯಾಗಿದೆ.

ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಸಂಜೆ ೬ಗಂಟೆ ಎಂದು ನಮೂದಿಸಿದ್ದೀರಿ. ಬೆಟ್ಟದ ತಪ್ಪಲಿನಿಂದ ದೇವಾಲಯಕ್ಕೆ ತೆರಳಲು ಸಂಜೆ ೪ಗಂಟೆ ವರೆಗೆ ಮಾತ್ರ ಅನುಮತಿ ಇರುತ್ತದೆ. ಹೀಗಾಗಿ ಈ ವಿಚಾರ ವ್ಯಾಪಕ ಚರ್ಚೆಗೆ ಗುರಿಯಾಗಿದೆ.

ಈ ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಅರಣ್ಯಾಧಿಕಾರಿಗಳು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

andolanait

Recent Posts

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

1 min ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

50 mins ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

1 hour ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

2 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago