BREAKING NEWS

ಅರಣ್ಯ ನಿಯಮ ಉಲ್ಲಂಘಿಸಿ ಡ್ರೋನ್‌ ಬಳಕೆ: ಪತ್ರಕರ್ತ ವಿಶ್ವೇಶ್ವರ ಭಟ್‌ಗೆ ನೋಟಿಸ್‌

ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್‌ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ಮೇಲೆ ಡ್ರೋನ್‌ ಕ್ಯಾಮೆರಾ ಬಳಸಿ ವೀಡಿಯೋ ಚೀತ್ರೀಕರಣ ಮಾಡಿದ್ದರು.

ಚಿತ್ರೀಕರಣದ ಕೆಲವು ದೃಶ್ಯಗಳನ್ನು ಹಾಗೂ ಕೆಲವು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಯಾವುದೇ ಅನುಮತಿ ಇಲ್ಲದೆ ಅಥವ ಅಧಿಕಾರಿಗಳ ಗಮನಕ್ಕೆ ತರದೆ ಡ್ರೋನ್‌ ಬಳಸಿದ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಜ.೧೦ರಂದು ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಿರುವ ಗೋಪಾಲಸ್ವಾಮಿ ಬೆಟ್ಟ ವಲಯಾ ಅರಣ್ಯಾಧಿಕಾರಿಗಳ ಕಚೇರಿ, ಅನುಮತಿ ಇಲ್ಲದೆ ಡ್ರೋನ್‌ ಬಳಕೆ ಮಾಡಿರುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ ೧೯೭೨ ಸೆಕ್ಷನ್‌ ೨೮,೧(ಬಿ)ರ ಉಲ್ಲಂಘನೆಯಾಗಿದೆ.

ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಸಂಜೆ ೬ಗಂಟೆ ಎಂದು ನಮೂದಿಸಿದ್ದೀರಿ. ಬೆಟ್ಟದ ತಪ್ಪಲಿನಿಂದ ದೇವಾಲಯಕ್ಕೆ ತೆರಳಲು ಸಂಜೆ ೪ಗಂಟೆ ವರೆಗೆ ಮಾತ್ರ ಅನುಮತಿ ಇರುತ್ತದೆ. ಹೀಗಾಗಿ ಈ ವಿಚಾರ ವ್ಯಾಪಕ ಚರ್ಚೆಗೆ ಗುರಿಯಾಗಿದೆ.

ಈ ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಅರಣ್ಯಾಧಿಕಾರಿಗಳು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

andolanait

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

17 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago