BREAKING NEWS

ಅರಣ್ಯ ನಿಯಮ ಉಲ್ಲಂಘಿಸಿ ಡ್ರೋನ್‌ ಬಳಕೆ: ಪತ್ರಕರ್ತ ವಿಶ್ವೇಶ್ವರ ಭಟ್‌ಗೆ ನೋಟಿಸ್‌

ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್‌ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ಮೇಲೆ ಡ್ರೋನ್‌ ಕ್ಯಾಮೆರಾ ಬಳಸಿ ವೀಡಿಯೋ ಚೀತ್ರೀಕರಣ ಮಾಡಿದ್ದರು.

ಚಿತ್ರೀಕರಣದ ಕೆಲವು ದೃಶ್ಯಗಳನ್ನು ಹಾಗೂ ಕೆಲವು ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಯಾವುದೇ ಅನುಮತಿ ಇಲ್ಲದೆ ಅಥವ ಅಧಿಕಾರಿಗಳ ಗಮನಕ್ಕೆ ತರದೆ ಡ್ರೋನ್‌ ಬಳಸಿದ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಜ.೧೦ರಂದು ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಿರುವ ಗೋಪಾಲಸ್ವಾಮಿ ಬೆಟ್ಟ ವಲಯಾ ಅರಣ್ಯಾಧಿಕಾರಿಗಳ ಕಚೇರಿ, ಅನುಮತಿ ಇಲ್ಲದೆ ಡ್ರೋನ್‌ ಬಳಕೆ ಮಾಡಿರುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ ೧೯೭೨ ಸೆಕ್ಷನ್‌ ೨೮,೧(ಬಿ)ರ ಉಲ್ಲಂಘನೆಯಾಗಿದೆ.

ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಸಂಜೆ ೬ಗಂಟೆ ಎಂದು ನಮೂದಿಸಿದ್ದೀರಿ. ಬೆಟ್ಟದ ತಪ್ಪಲಿನಿಂದ ದೇವಾಲಯಕ್ಕೆ ತೆರಳಲು ಸಂಜೆ ೪ಗಂಟೆ ವರೆಗೆ ಮಾತ್ರ ಅನುಮತಿ ಇರುತ್ತದೆ. ಹೀಗಾಗಿ ಈ ವಿಚಾರ ವ್ಯಾಪಕ ಚರ್ಚೆಗೆ ಗುರಿಯಾಗಿದೆ.

ಈ ಎರಡೂ ವಿಚಾರಗಳಿಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಿ ಉತ್ತರ ನೀಡಬೇಕು ಎಂದು ಅರಣ್ಯಾಧಿಕಾರಿಗಳು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

8 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

8 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

9 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

18 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

18 hours ago