ಪುಣೆ : ಮಹಾರಾಷ್ಟ್ರದ ಜೈಲುಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಹಾಗೂ ಕೈದಿಗಳ ಚಲನವಲನಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಡ್ರೋನ್ಗಳನ್ನು ಬಳಸಲು ರಾಜ್ಯ ಕಾರಾಗೃಹ ಇಲಾಖೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ, ಎಂಟು ಕೇಂದ್ರ ಕಾರಾಗೃಹಗಳು, ಎರಡು ಜಿಲ್ಲಾ ಕಾರಾಗೃಹಗಳು ಹಾಗೂ ಎರಡು ತೆರೆದ ಜೈಲುಗಳಲ್ಲಿ ಒಟ್ಟು 12 ಜೈಲುಗಳಲ್ಲಿ ಡ್ರೋನ್ಗಳನ್ನು ನಿಯೋಜಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಜೈಲು) ಅಮಿತಾಭ್ ಗುಪ್ತಾ ತಿಳಿಸಿದ್ದಾರೆ.
‘ಡ್ರೋನ್ಗಳನ್ನು ರಾತ್ರಿ ಸಮಯದಲ್ಲಿ ಕಣ್ಗಾವಲುಗಾಗಿಯೂ ಬಳಸಿಕೊಳ್ಳಲಾಗುವುದು. ಇದರಿಂದ ಜೈಲಿನ ಆವರಣದಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ನೈಜ ಚಿತ್ರಣ ಪಡೆಯಲು ಸಹಾಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಯರವಾಡ, ಕೊಲ್ಲಾಪುರ, ನಾಸಿಕ್, ಸಂಭಾಜಿ ನಗರ, ತಲೋಜಾ, ಠಾಣೆ, ಅಮರಾವತಿ, ನಾಗ್ಪುರ, ಕಲ್ಯಾಣ್ ಮತ್ತು ಚಂದ್ರಾಪುರ ಕಾರಾಗೃಹಗಳಲ್ಲಿ ಕಣ್ಗಾವಲು ಡ್ರೋನ್ಗಳನ್ನು ಬಳಸಲಾಗುವುದು ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯ ಮತ್ತು ಮಹಾರಾಷ್ಟ್ರ ಸರ್ಕಾರದ ಆದೇಶದ ಮೇರೆಗೆ ಕಣ್ಗಾವಲುಗಾಗಿ ಡ್ರೋನ್ಗಳ ಬಳಕೆಗೆ ಆದ್ಯತೆ ನೀಡಲಾಗಿದೆ. ಜೈಲು ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ನಂತರ ಡ್ರೋನ್ ಬಳಸುವ ಎರಡನೇ ರಾಜ್ಯ ಮಹಾರಾಷ್ಟ್ರವಾಗಿದೆ ಎಂದು ಕಾರಾಗೃಹ ಇಲಾಖೆ ತಿಳಿಸಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…