ಪುಣೆ : ಮಹಾರಾಷ್ಟ್ರದ ಜೈಲುಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಹಾಗೂ ಕೈದಿಗಳ ಚಲನವಲನಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಡ್ರೋನ್ಗಳನ್ನು ಬಳಸಲು ರಾಜ್ಯ ಕಾರಾಗೃಹ ಇಲಾಖೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ, ಎಂಟು ಕೇಂದ್ರ ಕಾರಾಗೃಹಗಳು, ಎರಡು ಜಿಲ್ಲಾ ಕಾರಾಗೃಹಗಳು ಹಾಗೂ ಎರಡು ತೆರೆದ ಜೈಲುಗಳಲ್ಲಿ ಒಟ್ಟು 12 ಜೈಲುಗಳಲ್ಲಿ ಡ್ರೋನ್ಗಳನ್ನು ನಿಯೋಜಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಜೈಲು) ಅಮಿತಾಭ್ ಗುಪ್ತಾ ತಿಳಿಸಿದ್ದಾರೆ.
‘ಡ್ರೋನ್ಗಳನ್ನು ರಾತ್ರಿ ಸಮಯದಲ್ಲಿ ಕಣ್ಗಾವಲುಗಾಗಿಯೂ ಬಳಸಿಕೊಳ್ಳಲಾಗುವುದು. ಇದರಿಂದ ಜೈಲಿನ ಆವರಣದಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ನೈಜ ಚಿತ್ರಣ ಪಡೆಯಲು ಸಹಾಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಯರವಾಡ, ಕೊಲ್ಲಾಪುರ, ನಾಸಿಕ್, ಸಂಭಾಜಿ ನಗರ, ತಲೋಜಾ, ಠಾಣೆ, ಅಮರಾವತಿ, ನಾಗ್ಪುರ, ಕಲ್ಯಾಣ್ ಮತ್ತು ಚಂದ್ರಾಪುರ ಕಾರಾಗೃಹಗಳಲ್ಲಿ ಕಣ್ಗಾವಲು ಡ್ರೋನ್ಗಳನ್ನು ಬಳಸಲಾಗುವುದು ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯ ಮತ್ತು ಮಹಾರಾಷ್ಟ್ರ ಸರ್ಕಾರದ ಆದೇಶದ ಮೇರೆಗೆ ಕಣ್ಗಾವಲುಗಾಗಿ ಡ್ರೋನ್ಗಳ ಬಳಕೆಗೆ ಆದ್ಯತೆ ನೀಡಲಾಗಿದೆ. ಜೈಲು ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ನಂತರ ಡ್ರೋನ್ ಬಳಸುವ ಎರಡನೇ ರಾಜ್ಯ ಮಹಾರಾಷ್ಟ್ರವಾಗಿದೆ ಎಂದು ಕಾರಾಗೃಹ ಇಲಾಖೆ ತಿಳಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…