ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಶನಿವಾರ ರಾತ್ರಿ ಗ್ಯಾಂಗ್ಸ್ಟರ್, ಮಾಜಿ ಸಂಸದ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.
ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪೊಲೀಸರು ಮತ್ತು ಮಾಧ್ಯಮದವರ ಎದುರೇ ಅತೀಕ್ ಮತ್ತು ಅಶ್ರಫ್ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಕೆಲಕಾಲ ಉದ್ರಿಕ್ತ ಪರಿಸ್ಥಿತಿ ತಲೆದೋರಿತ್ತು.
ಬಿಎಸ್ಪಿಯ ಮಾಜಿ ಶಾಸಕ ರಾಜು ಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳಾಗಿದ್ದರು.
ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್ ಅಹ್ಮದ್ನ ಪುತ್ರ ಅಸಾದ್ ಹಾಗೂ ಆತನ ಸಹಚರ ಗುಲಾಮ್ ಹತ್ಯೆಯಾಗಿದ್ದರು.
ಪಾತಕಿ ಅತೀಕ್ ಮೇಲೆ ಉಮೇಶ್ ಪಾಲ್ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಘಟನೆ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ‘ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಉತ್ತುಂಗಕ್ಕೇರಿವೆ. ಪೊಲೀಸರ ಭದ್ರತೆಯಲ್ಲಿ ಇರುವವವರೇ ಗುಂಡೇಟಿಗೆ ಬಲಿಯಾದರೆ ಜನಸಾಮಾನ್ಯರ ಪಾಡೇನು. ಈ ಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೆಲವರು ಉದ್ದೇಶಪೂರ್ವಕವಾಗಿಯೇ ಸಮಾಜದ ನೆಮ್ಮದಿ ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…