BREAKING NEWS

ಉತ್ತರ ಪ್ರದೇಶ: ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಗುಂಡೇಟಿಗೆ ಬಲಿ

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.

ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪೊಲೀಸರು ಮತ್ತು ಮಾಧ್ಯಮದವರ ಎದುರೇ ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಕೆಲಕಾಲ ಉದ್ರಿಕ್ತ ಪರಿಸ್ಥಿತಿ ತಲೆದೋರಿತ್ತು.

ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳಾಗಿದ್ದರು.

ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಉಮೇಶ್‌ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್‌ ಅಹ್ಮದ್‌ನ ಪುತ್ರ ಅಸಾದ್‌ ಹಾಗೂ ಆತನ ಸಹಚರ ಗುಲಾಮ್‌ ಹತ್ಯೆಯಾಗಿದ್ದರು.

ಪಾತಕಿ ಅತೀಕ್‌ ಮೇಲೆ ಉಮೇಶ್‌ ಪಾಲ್‌ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಘಟನೆ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಟ್ವೀಟ್‌ ಮಾಡಿದ್ದು, ‘ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಉತ್ತುಂಗಕ್ಕೇರಿವೆ. ಪೊಲೀಸರ ಭದ್ರತೆಯಲ್ಲಿ ಇರುವವವರೇ ಗುಂಡೇಟಿಗೆ ಬಲಿಯಾದರೆ ಜನಸಾಮಾನ್ಯರ ಪಾಡೇನು. ಈ ಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೆಲವರು ಉದ್ದೇಶಪೂರ್ವಕವಾಗಿಯೇ ಸಮಾಜದ ನೆಮ್ಮದಿ ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago