ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಶನಿವಾರ ರಾತ್ರಿ ಗ್ಯಾಂಗ್ಸ್ಟರ್, ಮಾಜಿ ಸಂಸದ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.
ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪೊಲೀಸರು ಮತ್ತು ಮಾಧ್ಯಮದವರ ಎದುರೇ ಅತೀಕ್ ಮತ್ತು ಅಶ್ರಫ್ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಕೆಲಕಾಲ ಉದ್ರಿಕ್ತ ಪರಿಸ್ಥಿತಿ ತಲೆದೋರಿತ್ತು.
ಬಿಎಸ್ಪಿಯ ಮಾಜಿ ಶಾಸಕ ರಾಜು ಪಾಲ್ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳಾಗಿದ್ದರು.
ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್ ಅಹ್ಮದ್ನ ಪುತ್ರ ಅಸಾದ್ ಹಾಗೂ ಆತನ ಸಹಚರ ಗುಲಾಮ್ ಹತ್ಯೆಯಾಗಿದ್ದರು.
ಪಾತಕಿ ಅತೀಕ್ ಮೇಲೆ ಉಮೇಶ್ ಪಾಲ್ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಘಟನೆ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ‘ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಉತ್ತುಂಗಕ್ಕೇರಿವೆ. ಪೊಲೀಸರ ಭದ್ರತೆಯಲ್ಲಿ ಇರುವವವರೇ ಗುಂಡೇಟಿಗೆ ಬಲಿಯಾದರೆ ಜನಸಾಮಾನ್ಯರ ಪಾಡೇನು. ಈ ಘಟನೆಯಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೆಲವರು ಉದ್ದೇಶಪೂರ್ವಕವಾಗಿಯೇ ಸಮಾಜದ ನೆಮ್ಮದಿ ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…