BREAKING NEWS

ಬಂಡೇ ಮಠದ ಸ್ವಾಮೀಜಿಯವರ ವದಂತಿಗೆ ತೆರೆ ಎಳೆದ ಎಸ್ಪಿ ಸಂತೋಷ್‌ ಬಾಬು.

ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಜನರು ಮಾತಾಡಿಕೊಳ್ಳುವಂತಾಗಿದೆ. ಆದರೆ, ರಾಮನಗರದ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ವದಂತಿಗಳನ್ನು ತಳ್ಳಿಹಾಕಿದ್ದು, ತನಿಖೆ ಮುಗಿದಾದ ಮೇಲೆ ಸತ್ಯ ಬಹಿರಂಗವಾಗುತ್ತದೆ ಎಂದಿದ್ದಾರೆ.

ಸ್ವಾಮೀಜಿಯವರು ಬರೆದಿರುವ ಡೆತ್ ನೋಟ್ ನಲ್ಲಿ ಅನಾಮಿಕ ಮಹಿಳೆಯ ಬಗ್ಗೆಯೂ ಹೇಳಿದ್ದು, ಅದು ಹನಿಟ್ರ್ಯಾಪ್ ನ ಮಹಿಳೆಯೇ ಆಗಿರಬಹುದು ಎಂಬ ಗುಮಾನಿ ಎದ್ದಿದೆ. ಆದರೆ, ರಾಮನಗರದ ಎಸ್ಪಿ ಸಂತೋಷ್ ಕುಮಾರ್ ಪೊಲೀಸ್ ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಮಠದಲ್ಲಿರುವ ಸ್ವಾಮೀಜಿಯವರ ಕೊಠಡಿಯಲ್ಲಿ ಸ್ವಾಮೀಜಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿಯ ಕೊಠಡಿಯಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಮಂಗಳವಾರದಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ಸಂತೋಷ್ ಬಾಬು ಮಾತಾನಾಡಿ, ಸ್ವಾಮೀಜಿಯವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಡೆತ್ ನೋಟ್ ನಲ್ಲಿ ಆತ್ಮಹತ್ಯೆಯ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿಲ್ಲ. ಕೆಲವರಿಂದ ತಮಗೆ ಕಿರುಕುಳವಾಗುತ್ತಿದೆ ಎಂದು ಹೇಳಿದ್ದಾರಷ್ಟೇ. ಆದರೆ, ‘ಅವರ ಕಿರುಕುಳದಿಂದ ತಾವು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಪತ್ರದಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ ಎಂದು ಹೇಳಿದ್ದಾರೆ.

 

andolana

Recent Posts

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

4 mins ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

9 mins ago

ಮನರೇಗಾ | ಬಹಿರಂಗ ಚರ್ಚೆಗೆ ನಾವು ಸಿದ್ಧ : ಡಿಸಿಎಂ ಡಿಕೆಶಿ

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ…

17 mins ago

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ…

60 mins ago

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ : ನಿಧಿ ಕಾಯ್ದೆ ಹೇಳೋದೇನು? ಪುರಾತತ್ವಜ್ಞರ ವಾದವೇನು? ಇಲ್ಲಿದೆ ಸಮಗ್ರ ಮಾಹಿತಿ

ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ…

2 hours ago

ಮೂಲ ಸೌಕರ್ಯ ಸಮಸ್ಯೆ : ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಸಂಸದ ಯದುವೀರ್‌

ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು…

3 hours ago