BREAKING NEWS

ಬಂಡೇ ಮಠದ ಸ್ವಾಮೀಜಿಯವರ ವದಂತಿಗೆ ತೆರೆ ಎಳೆದ ಎಸ್ಪಿ ಸಂತೋಷ್‌ ಬಾಬು.

ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಜನರು ಮಾತಾಡಿಕೊಳ್ಳುವಂತಾಗಿದೆ. ಆದರೆ, ರಾಮನಗರದ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ವದಂತಿಗಳನ್ನು ತಳ್ಳಿಹಾಕಿದ್ದು, ತನಿಖೆ ಮುಗಿದಾದ ಮೇಲೆ ಸತ್ಯ ಬಹಿರಂಗವಾಗುತ್ತದೆ ಎಂದಿದ್ದಾರೆ.

ಸ್ವಾಮೀಜಿಯವರು ಬರೆದಿರುವ ಡೆತ್ ನೋಟ್ ನಲ್ಲಿ ಅನಾಮಿಕ ಮಹಿಳೆಯ ಬಗ್ಗೆಯೂ ಹೇಳಿದ್ದು, ಅದು ಹನಿಟ್ರ್ಯಾಪ್ ನ ಮಹಿಳೆಯೇ ಆಗಿರಬಹುದು ಎಂಬ ಗುಮಾನಿ ಎದ್ದಿದೆ. ಆದರೆ, ರಾಮನಗರದ ಎಸ್ಪಿ ಸಂತೋಷ್ ಕುಮಾರ್ ಪೊಲೀಸ್ ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಮಠದಲ್ಲಿರುವ ಸ್ವಾಮೀಜಿಯವರ ಕೊಠಡಿಯಲ್ಲಿ ಸ್ವಾಮೀಜಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿಯ ಕೊಠಡಿಯಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಮಂಗಳವಾರದಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ಸಂತೋಷ್ ಬಾಬು ಮಾತಾನಾಡಿ, ಸ್ವಾಮೀಜಿಯವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಡೆತ್ ನೋಟ್ ನಲ್ಲಿ ಆತ್ಮಹತ್ಯೆಯ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿಲ್ಲ. ಕೆಲವರಿಂದ ತಮಗೆ ಕಿರುಕುಳವಾಗುತ್ತಿದೆ ಎಂದು ಹೇಳಿದ್ದಾರಷ್ಟೇ. ಆದರೆ, ‘ಅವರ ಕಿರುಕುಳದಿಂದ ತಾವು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಪತ್ರದಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ ಎಂದು ಹೇಳಿದ್ದಾರೆ.

 

andolana

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

7 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

9 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

10 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

10 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

11 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

11 hours ago