BREAKING NEWS

ಬಂಡೇ ಮಠದ ಸ್ವಾಮೀಜಿಯವರ ವದಂತಿಗೆ ತೆರೆ ಎಳೆದ ಎಸ್ಪಿ ಸಂತೋಷ್‌ ಬಾಬು.

ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಜನರು ಮಾತಾಡಿಕೊಳ್ಳುವಂತಾಗಿದೆ. ಆದರೆ, ರಾಮನಗರದ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ವದಂತಿಗಳನ್ನು ತಳ್ಳಿಹಾಕಿದ್ದು, ತನಿಖೆ ಮುಗಿದಾದ ಮೇಲೆ ಸತ್ಯ ಬಹಿರಂಗವಾಗುತ್ತದೆ ಎಂದಿದ್ದಾರೆ.

ಸ್ವಾಮೀಜಿಯವರು ಬರೆದಿರುವ ಡೆತ್ ನೋಟ್ ನಲ್ಲಿ ಅನಾಮಿಕ ಮಹಿಳೆಯ ಬಗ್ಗೆಯೂ ಹೇಳಿದ್ದು, ಅದು ಹನಿಟ್ರ್ಯಾಪ್ ನ ಮಹಿಳೆಯೇ ಆಗಿರಬಹುದು ಎಂಬ ಗುಮಾನಿ ಎದ್ದಿದೆ. ಆದರೆ, ರಾಮನಗರದ ಎಸ್ಪಿ ಸಂತೋಷ್ ಕುಮಾರ್ ಪೊಲೀಸ್ ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಮಠದಲ್ಲಿರುವ ಸ್ವಾಮೀಜಿಯವರ ಕೊಠಡಿಯಲ್ಲಿ ಸ್ವಾಮೀಜಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿಯ ಕೊಠಡಿಯಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಮಂಗಳವಾರದಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ಸಂತೋಷ್ ಬಾಬು ಮಾತಾನಾಡಿ, ಸ್ವಾಮೀಜಿಯವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಡೆತ್ ನೋಟ್ ನಲ್ಲಿ ಆತ್ಮಹತ್ಯೆಯ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿಲ್ಲ. ಕೆಲವರಿಂದ ತಮಗೆ ಕಿರುಕುಳವಾಗುತ್ತಿದೆ ಎಂದು ಹೇಳಿದ್ದಾರಷ್ಟೇ. ಆದರೆ, ‘ಅವರ ಕಿರುಕುಳದಿಂದ ತಾವು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಪತ್ರದಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ ಎಂದು ಹೇಳಿದ್ದಾರೆ.

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago