BREAKING NEWS

ಬಂಡೇ ಮಠದ ಸ್ವಾಮೀಜಿಯವರ ವದಂತಿಗೆ ತೆರೆ ಎಳೆದ ಎಸ್ಪಿ ಸಂತೋಷ್‌ ಬಾಬು.

ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಜನರು ಮಾತಾಡಿಕೊಳ್ಳುವಂತಾಗಿದೆ. ಆದರೆ, ರಾಮನಗರದ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ವದಂತಿಗಳನ್ನು ತಳ್ಳಿಹಾಕಿದ್ದು, ತನಿಖೆ ಮುಗಿದಾದ ಮೇಲೆ ಸತ್ಯ ಬಹಿರಂಗವಾಗುತ್ತದೆ ಎಂದಿದ್ದಾರೆ.

ಸ್ವಾಮೀಜಿಯವರು ಬರೆದಿರುವ ಡೆತ್ ನೋಟ್ ನಲ್ಲಿ ಅನಾಮಿಕ ಮಹಿಳೆಯ ಬಗ್ಗೆಯೂ ಹೇಳಿದ್ದು, ಅದು ಹನಿಟ್ರ್ಯಾಪ್ ನ ಮಹಿಳೆಯೇ ಆಗಿರಬಹುದು ಎಂಬ ಗುಮಾನಿ ಎದ್ದಿದೆ. ಆದರೆ, ರಾಮನಗರದ ಎಸ್ಪಿ ಸಂತೋಷ್ ಕುಮಾರ್ ಪೊಲೀಸ್ ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಮಠದಲ್ಲಿರುವ ಸ್ವಾಮೀಜಿಯವರ ಕೊಠಡಿಯಲ್ಲಿ ಸ್ವಾಮೀಜಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿಯ ಕೊಠಡಿಯಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಮಂಗಳವಾರದಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ಸಂತೋಷ್ ಬಾಬು ಮಾತಾನಾಡಿ, ಸ್ವಾಮೀಜಿಯವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಡೆತ್ ನೋಟ್ ನಲ್ಲಿ ಆತ್ಮಹತ್ಯೆಯ ಬಗ್ಗೆ ಸ್ವಾಮೀಜಿ ಉಲ್ಲೇಖಿಸಿಲ್ಲ. ಕೆಲವರಿಂದ ತಮಗೆ ಕಿರುಕುಳವಾಗುತ್ತಿದೆ ಎಂದು ಹೇಳಿದ್ದಾರಷ್ಟೇ. ಆದರೆ, ‘ಅವರ ಕಿರುಕುಳದಿಂದ ತಾವು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಪತ್ರದಲ್ಲಿ ಎಲ್ಲೂ ಪ್ರಸ್ತಾಪಿಸಿಲ್ಲ ಎಂದು ಹೇಳಿದ್ದಾರೆ.

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago