ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ ಕರೆತಂದಿದ್ದಾರೆ ರಾಮೋಹಳ್ಳಿ ಅರಣ್ಯಾಧಿಕಾರಿಗಳು. ಸದ್ಯ ವರ್ತೂರು ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿದೆ. ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ಅವರ ವಿಚಾರಣೆ ನಡೆಯುತ್ತಿದೆ.
ಈ ಕುರಿತು ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು ಎಂದರು.
ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದರು. ಬಿಗ್ ಬಾಸ್ ತಂಡಕ್ಕೆ ವಿವರಗಳನ್ನು ತಿಳಿಸಿ ಸಂತೋಷ್ ಅವರನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಬಿಗ್ ಬಾಸ್ ಮನೆಯಿಂದ ಕರೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…