ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ ಕರೆತಂದಿದ್ದಾರೆ ರಾಮೋಹಳ್ಳಿ ಅರಣ್ಯಾಧಿಕಾರಿಗಳು. ಸದ್ಯ ವರ್ತೂರು ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿದೆ. ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ಅವರ ವಿಚಾರಣೆ ನಡೆಯುತ್ತಿದೆ.
ಈ ಕುರಿತು ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು ಎಂದರು.
ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದರು. ಬಿಗ್ ಬಾಸ್ ತಂಡಕ್ಕೆ ವಿವರಗಳನ್ನು ತಿಳಿಸಿ ಸಂತೋಷ್ ಅವರನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಬಿಗ್ ಬಾಸ್ ಮನೆಯಿಂದ ಕರೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…