BREAKING NEWS

ವರುಣ: ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಏ.19ರಂದು

ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್ ಏ.15ರಂದು ಮಧ್ಯಾಹ್ನ 12ಕ್ಕೆ ಹುಣಸೂರಿನಲ್ಲಿ, ಎಚ್.ಡಿ.ಕೋಟೆ ಕ್ಷೇತ್ರದ ಅಭ್ಯರ್ಥಿ ಅನಿಲ್‌ ಚಿಕ್ಕಮಾದು ಏ.17ರಂದು ಮಧ್ಯಾಹ್ನ 2ಕ್ಕೆ ಎಚ್‌.ಡಿ.ಕೋಟೆಯಲ್ಲಿ ಉಮೇದುವಾರಿಕೆ ನೀಡಲಿದ್ದಾರೆ.

ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಏ.19ರಂದು ಮಧ್ಯಾಹ್ನ 2ಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಪಿರಿಯಾಪಟ್ಟಣದ ಅಭ್ಯರ್ಥಿ ಕೆ.ವೆಂಕಟೇಶ್‌ ಮತ್ತೊಮ್ಮೆ ಏ.17ರಂದು ಮಧ್ಯಾಹ್ನ 2ಕ್ಕೆ ಪಿರಿಯಾಪಟ್ಟಣದಲ್ಲಿ, ನಂಜನಗೂಡು ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ ಏ.17ರಂದು ಮಧ್ಯಾಹ್ನ 12ಕ್ಕೆ ನಂಜನಗೂಡಿನಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಮಾವಿನಹಳ್ಳಿ ಎಸ್.ಸಿದ್ದೇಗೌಡ ಏ.17ರಂದು ಮಧ್ಯಾಹ್ನ 3ಕ್ಕೆ ಮೈಸೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ, ಕೆ.ಆರ್.ನಗರದ ಅಭ್ಯರ್ಥಿ ಡಿ.ರವಿಶಂಕರ್‌ ಏ.17ರಂದು ಮಧ್ಯಾಹ್ನ 12ಕ್ಕೆ ಕೆ.ಆರ್.ನಗರದಲ್ಲಿ, ತಿ.ನರಸೀಪುರ ಕ್ಷೇತ್ರದಿಂದ ಡಾ.ಎಚ್‌.ಸಿ.ಮಹದೇವಪ್ಪ ಏ.20ರಂದು ಮಧ್ಯಾಹ್ನ 12ಕ್ಕೆ ತಿ.ನರಸೀಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago