BREAKING NEWS

ವರುಣ: ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಏ.19ರಂದು

ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್ ಏ.15ರಂದು ಮಧ್ಯಾಹ್ನ 12ಕ್ಕೆ ಹುಣಸೂರಿನಲ್ಲಿ, ಎಚ್.ಡಿ.ಕೋಟೆ ಕ್ಷೇತ್ರದ ಅಭ್ಯರ್ಥಿ ಅನಿಲ್‌ ಚಿಕ್ಕಮಾದು ಏ.17ರಂದು ಮಧ್ಯಾಹ್ನ 2ಕ್ಕೆ ಎಚ್‌.ಡಿ.ಕೋಟೆಯಲ್ಲಿ ಉಮೇದುವಾರಿಕೆ ನೀಡಲಿದ್ದಾರೆ.

ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಏ.19ರಂದು ಮಧ್ಯಾಹ್ನ 2ಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಪಿರಿಯಾಪಟ್ಟಣದ ಅಭ್ಯರ್ಥಿ ಕೆ.ವೆಂಕಟೇಶ್‌ ಮತ್ತೊಮ್ಮೆ ಏ.17ರಂದು ಮಧ್ಯಾಹ್ನ 2ಕ್ಕೆ ಪಿರಿಯಾಪಟ್ಟಣದಲ್ಲಿ, ನಂಜನಗೂಡು ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ ಏ.17ರಂದು ಮಧ್ಯಾಹ್ನ 12ಕ್ಕೆ ನಂಜನಗೂಡಿನಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಮಾವಿನಹಳ್ಳಿ ಎಸ್.ಸಿದ್ದೇಗೌಡ ಏ.17ರಂದು ಮಧ್ಯಾಹ್ನ 3ಕ್ಕೆ ಮೈಸೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ, ಕೆ.ಆರ್.ನಗರದ ಅಭ್ಯರ್ಥಿ ಡಿ.ರವಿಶಂಕರ್‌ ಏ.17ರಂದು ಮಧ್ಯಾಹ್ನ 12ಕ್ಕೆ ಕೆ.ಆರ್.ನಗರದಲ್ಲಿ, ತಿ.ನರಸೀಪುರ ಕ್ಷೇತ್ರದಿಂದ ಡಾ.ಎಚ್‌.ಸಿ.ಮಹದೇವಪ್ಪ ಏ.20ರಂದು ಮಧ್ಯಾಹ್ನ 12ಕ್ಕೆ ತಿ.ನರಸೀಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ತಿಳಿಸಿದ್ದಾರೆ.

andolanait

Recent Posts

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

53 seconds ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

6 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago