BREAKING NEWS

ವರುಣ: ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಏ.19ರಂದು

ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್ ಏ.15ರಂದು ಮಧ್ಯಾಹ್ನ 12ಕ್ಕೆ ಹುಣಸೂರಿನಲ್ಲಿ, ಎಚ್.ಡಿ.ಕೋಟೆ ಕ್ಷೇತ್ರದ ಅಭ್ಯರ್ಥಿ ಅನಿಲ್‌ ಚಿಕ್ಕಮಾದು ಏ.17ರಂದು ಮಧ್ಯಾಹ್ನ 2ಕ್ಕೆ ಎಚ್‌.ಡಿ.ಕೋಟೆಯಲ್ಲಿ ಉಮೇದುವಾರಿಕೆ ನೀಡಲಿದ್ದಾರೆ.

ವರುಣ ಕ್ಷೇತ್ರದ ಅಭ್ಯರ್ಥಿ ಸಿದ್ದರಾಮಯ್ಯ ಏ.19ರಂದು ಮಧ್ಯಾಹ್ನ 2ಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಪಿರಿಯಾಪಟ್ಟಣದ ಅಭ್ಯರ್ಥಿ ಕೆ.ವೆಂಕಟೇಶ್‌ ಮತ್ತೊಮ್ಮೆ ಏ.17ರಂದು ಮಧ್ಯಾಹ್ನ 2ಕ್ಕೆ ಪಿರಿಯಾಪಟ್ಟಣದಲ್ಲಿ, ನಂಜನಗೂಡು ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ ಏ.17ರಂದು ಮಧ್ಯಾಹ್ನ 12ಕ್ಕೆ ನಂಜನಗೂಡಿನಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಮಾವಿನಹಳ್ಳಿ ಎಸ್.ಸಿದ್ದೇಗೌಡ ಏ.17ರಂದು ಮಧ್ಯಾಹ್ನ 3ಕ್ಕೆ ಮೈಸೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ, ಕೆ.ಆರ್.ನಗರದ ಅಭ್ಯರ್ಥಿ ಡಿ.ರವಿಶಂಕರ್‌ ಏ.17ರಂದು ಮಧ್ಯಾಹ್ನ 12ಕ್ಕೆ ಕೆ.ಆರ್.ನಗರದಲ್ಲಿ, ತಿ.ನರಸೀಪುರ ಕ್ಷೇತ್ರದಿಂದ ಡಾ.ಎಚ್‌.ಸಿ.ಮಹದೇವಪ್ಪ ಏ.20ರಂದು ಮಧ್ಯಾಹ್ನ 12ಕ್ಕೆ ತಿ.ನರಸೀಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ತಿಳಿಸಿದ್ದಾರೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

12 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

20 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago