BREAKING NEWS

ಉತ್ತರ ಭಾರತದಲ್ಲಿ ವರುಣಾರ್ಭಟ: ಹಿರಿಯ ಸಚಿವರೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರೀ ಮಳೆಗೆ ಉತ್ತರ ಭಾರತದಲ್ಲಿ ತತ್ತರಿಸಿದ್ದು, ಕಳೆದ ಮೂರು ದಿನಗಳಲ್ಲಿ 28ಕ್ಕೂ ಹೆಚ್ಚು ಮಂದಿ ಮಳೆ ಅನಾಹುತಕ್ಕೆ ಬಲಿಯಾಗಿದ್ದಾರೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಳೆ ಪೀಡಿತ ರಾಜ್ಯಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದ್ದು,  ಯಮುನಾ ನದಿಯ ನೀರಿನ ಮಟ್ಟದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. ಉತ್ತರ ಭಾರತದಲ್ಲಿ ಹಲವು ನಗರಗಳು ಮತ್ತು ಪಟ್ಟಣಗಳಲ್ಲಿ, ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ

ಪ್ರಧಾನಿ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದು, ದೇಶದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯಿಂದಾದ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಅವರ ಕಚೇರಿ ತಿಳಿಸಿದೆ.

ಸ್ಥಳೀಯ ಆಡಳಿತಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ತಂಡಗಳು ಸಂತ್ರಸ್ತರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಕೆಲಸ ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ವ್ಯಾಪಕ ಹಾನಿ ಮತ್ತು ಅನಾನುಕೂಲತೆ ಉಂಟಾಗಿದೆ. ಭಾರೀ ಮಳೆಯಿಂದ ರಾಜಸ್ಥಾನದ ಅಜ್ಮೀರ್, ಸಿಕರ್ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರಾಜಸ್ಥಾನದ ಸಿಕಾರ್‍ನಲ್ಲಿ ವ್ಯಾಪಕವಾದ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಿಮಾಚಲ ಪ್ರದೇಶದ ಪ್ರವಾಸಿ ಪಟ್ಟಣವಾದ ಮನಾಲಿಯಲ್ಲಿ ಸಿಲುಕಿದ್ದ 20 ಜನರನ್ನು ರಕ್ಷಿಸಲಾಗಿದೆ. ಆದರೆ ಸೋಮವಾರ ಮೂರನೇ ದಿನವೂ ಭಾರೀ ಮಳೆಯಿಂದಾಗಿ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 300 ಮಂದಿ ಸಿಲುಕಿಕೊಂಡಿದ್ದಾರೆ.

ಭಾನುವಾರ ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಮನೆಗಳಿಗೆ ಹಾನಿಯಾಗಿದೆ ಮತ್ತು ಹಲವಾರು ಜನರು ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಇಂದು “ರೆಡ್” ಅಲರ್ಟ್ ಘೋಷಿಸಿದೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಭಾರೀ ಮಳೆಯಲ್ಲಿ, ವಿಶೇಷವಾಗಿ ನದಿಗಳು ಮತ್ತು ನಾಲೆಗಳ ಬಳಿ ಜನರು ಹೋಗಬಾರದು ಮತ್ತು ಮುಂದಿನ 24 ಗಂಟೆಗಳ ಕಾಲ ತೀವ್ರ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ.

ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಸತತ ಮೂರನೇ ದಿನವಾದ ಸೋಮವಾರ ಭಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹೆಚ್ಚು ಹಾನಿಗೊಳಗಾದ ಸ್ಥಳಗಳಲ್ಲಿನ ಜನರನ್ನು ತಲುಪಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಹವಾಮಾನ ಇಲಾಖೆ ಪ್ರಕಾರ, ಪಂಜಾಬ್ ಮತ್ತು ಹರಿಯಾಣದ ಹಲವೆಡೆ ಬೆಳಗ್ಗೆಯಿಂದ ಮಳೆಯಾಗುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಗೃಹ, ವಿಪತ್ತು ನಿರ್ವಹಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಮಳೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಾನ್ಸೂನ್ ಮಳೆಯ ನಂತರ ಪಂಜಾಬ್‌ನ ಪಟಿಯಾಲ ಜಿಲ್ಲೆ ಪ್ರವಾಹದಿಂದ ತತ್ತರಿಸುತ್ತಿದ್ದು, ಬಿಕ್ಕಟ್ಟನ್ನು ಎದುರಿಸಲು ಅಧಿಕಾರಿಗಳು, ಸೇನೆಯ ಸಹಾಯವನ್ನು ಕೋರಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago