ತಮಿಳುನಾಡು: ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರವು ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ.
ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ದಿನವಿಡೀ ಮಳೆಯಾಗುವ ಮುನ್ಸೂಚನೆಯಿದೆ. ಬೆಳಗ್ಗೆಯಿಂದಲೇ ಮಳೆ ಭಾರೀ ಮಳೆ ಶುರುವಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಚೆನ್ನೈ ಮಹಾನಗರದಲ್ಲಿ ಭಾನುವಾರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 5.30ರವರೆಗೆ 137.6 ಮಿ.ಮೀ ಮಳೆಯಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ದುಬೈ-ಚೆನ್ನೈ ವಿಮಾನ ಬೆಂಗಳೂರಿಗೆ ಮಾರ್ಗ ಬದಲಿಸಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ವಿಮಾನಗಳು ವಿಳಂಬವಾಗಿವೆ.
ಚೆನ್ನೈನ ಕೆಲವು ಭಾಗದಲ್ಲಿ ಮಳೆಯಿಂದ ಅನಾಹುತಗಳು ಆಗಿದ್ದು, ಮನೆಗಳಿಗೆ ನೀರು ನುಗ್ಗಿದ ವರದಿಯಾಗಿದೆ.
ಆದರೆ, ಮುಂದಿನ ಮೂರು ದಿನಗಳ ಕಾಲ ತೆಲಂಗಾಣದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತಾಪಕ್ಕೆ ಸಾಕ್ಷಿಯಾಗಲಿದೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…