BREAKING NEWS

ತಮಿಳುನಾಡಿನಲ್ಲಿ ವರುಣಾರ್ಭಟ: ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ತಮಿಳುನಾಡು: ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ  ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರವು ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ.

ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ದಿನವಿಡೀ ಮಳೆಯಾಗುವ ಮುನ್ಸೂಚನೆಯಿದೆ. ಬೆಳಗ್ಗೆಯಿಂದಲೇ ಮಳೆ ಭಾರೀ ಮಳೆ ಶುರುವಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಚೆನ್ನೈ ಮಹಾನಗರದಲ್ಲಿ ಭಾನುವಾರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 5.30ರವರೆಗೆ 137.6 ಮಿ.ಮೀ ಮಳೆಯಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ದುಬೈ-ಚೆನ್ನೈ ವಿಮಾನ ಬೆಂಗಳೂರಿಗೆ ಮಾರ್ಗ ಬದಲಿಸಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ವಿಮಾನಗಳು ವಿಳಂಬವಾಗಿವೆ.

ಚೆನ್ನೈನ ಕೆಲವು ಭಾಗದಲ್ಲಿ ಮಳೆಯಿಂದ ಅನಾಹುತಗಳು ಆಗಿದ್ದು, ಮನೆಗಳಿಗೆ ನೀರು ನುಗ್ಗಿದ ವರದಿಯಾಗಿದೆ.

ಆದರೆ, ಮುಂದಿನ ಮೂರು ದಿನಗಳ ಕಾಲ ತೆಲಂಗಾಣದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತಾಪಕ್ಕೆ ಸಾಕ್ಷಿಯಾಗಲಿದೆ.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago