BREAKING NEWS

ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು:  ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. .

ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್‌ವುಡ್‌ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ವಿಚಾರ ಜನರನ್ನು ಗಾಬರಿಗೊಳಿಸುವುದು ಸಾಮಾನ್ಯವಾಗಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ.

ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ತಿಳಿಸಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವರದಿಯಂತೆ ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

15 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

34 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

48 mins ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

1 hour ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

2 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

2 hours ago