BREAKING NEWS

ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು:  ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. .

ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್‌ವುಡ್‌ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ವಿಚಾರ ಜನರನ್ನು ಗಾಬರಿಗೊಳಿಸುವುದು ಸಾಮಾನ್ಯವಾಗಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ.

ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ತಿಳಿಸಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವರದಿಯಂತೆ ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

6 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

8 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

9 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

9 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

9 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

10 hours ago