ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. .
ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್ವುಡ್ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ.
ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ವಿಚಾರ ಜನರನ್ನು ಗಾಬರಿಗೊಳಿಸುವುದು ಸಾಮಾನ್ಯವಾಗಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ.
ಭಾರತಿ ವಿಷ್ಣುವರ್ಧನ್ ಅವರು ವಯೋಸಹಜ ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ತಿಳಿಸಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ವರದಿಯಂತೆ ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…