BREAKING NEWS

ಬಾಲಕನ ಜತೆ ಚುಂಬಿಸುವ ವಿಡಿಯೊ: ಕ್ಷಮೆಯಾಚಿಸಿದ ದಲೈಲಾಮಾ

ನವದೆಹಲಿ: ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದಲೈಲಾಮಾ ಕ್ಷಮೆ ಕೇಳಿದ್ದಾರೆ.

ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧರ್ಮಗುರುವಿಗೆ ಗೌರವ ಸಲ್ಲಿಸಲು ಬಂದಿದ್ದ ಬಾಲಕನ ತುಟಿಗಳನ್ನು ದಲೈಲಾಮಾ ಚುಂಬಿಸಿದ್ದರು. ನಂತರ ತಮ್ಮ ನಾಲಿಗೆಯನ್ನು ಹೊರ ಚಾಚಿ ಅದನ್ನು ಚೀಪುವಂತೆ ಬಾಲಕನಿಗೆ ಹೇಳಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣ ಬಳಕೆದಾರರಿಂದ ಆಕ್ರೋಶದ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಈ ಘಟನೆ ಬಗ್ಗೆ ದಲೈಲಾಮಾ ಕ್ಷಮೆ ಕೋರಿ ಟ್ವೀಟ್‌ ಮಾಡಿದ್ದಾರೆ.

ಬಾಲಕ ಮತ್ತು ಅವನ ಕುಟುಂಬಕ್ಕೆ ಉಂಟಾದ ನೋವಿಗೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಅವರ ಕಚೇರಿಯು ಟ್ವೀಟ್‌ ಮಾಡಿ ಹೇಳಿಕೆ ನೀಡಿದ್ದು, ‘ದಲೈಲಾಮಾ ಅವರು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ಭೇಟಿಯಾಗುವ ಜನರನ್ನು ಆಗಾಗ್ಗೆ ಕೀಟಲೆ ಮಾಡುತ್ತಿರುತ್ತಾರೆ‘ ಎಂದು ಹೇಳಿದೆ.

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

7 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

8 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

9 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago